ತಮಿಳುನಾಡು ವಿಧಾನಸಭೆಯಲ್ಲಿ ಸಿಯುಇಟಿ ವಿರುದ್ಧ ನಿರ್ಣಯ ಅಂಗೀಕಾರ
Team Udayavani, Apr 11, 2022, 9:30 PM IST
ಚೆನ್ನೈ: ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸಲು ಉದ್ದೇಶಿಸಲಾಗಿರುವ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ)ಯಿಂದ ತಮಿಳುನಾಡು ವಿಮುಖವಾಗಲು ನಿರ್ಧರಿಸಿದೆ.
ಈ ಕುರಿತಂತೆ, ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದ ಗೊತ್ತುವಳಿಗೆ ಸದನದ ಅಂಗೀಕಾರ ಸಿಕ್ಕಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಡಿಸಿದ್ದ ನಿರ್ಣಯ ವಿರೋಧಿಸಿದ ಬಿಜೆಪಿ ಸಭಾತ್ಯಾಗ ನಡೆಸಿದ್ದು, ಪ್ರಮುಖ ವಿಪಕ್ಷವಾದ ಎಐಎಡಿಎಂಕೆ, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಸದಸ್ಯರು ಪಕ್ಷಭೇದ ಮರೆತು ನಿರ್ಣಯದ ಪರ ಮತಚಲಾಯಿಸಿದ್ದಾರೆ.
ಕಾರಣವೇನು?:
ಸಿಯುಇಟಿ ಪರಿಕಲ್ಪನೆಯಡಿ, ರಾಷ್ಟ್ರೀಯ ಪರೀûಾ ಪ್ರಾಧಿಕಾರ ನಡೆಸುವ ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆಯುವ ಅಂಕಗಳ ಆಧಾರದ ಮೇಲೆ ರಾಜ್ಯಗಳ ಕೇಂದ್ರೀಯ ವಿವಿಗಳಲ್ಲಿ ಪ್ರವೇಶ ಕಲ್ಪಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಸಿಯುಇಟಿ ಪರೀಕ್ಷೆಗೆ ಸಮ್ಮತಿಸುವ ರಾಜ್ಯಗಳ ಸರ್ಕಾರಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳು ತಮ್ಮಲ್ಲಿನ ಪ್ರವೇಶಕ್ಕೂ ಸಿಯುಇಟಿ ಅಂಕಗಳ ಮಾನದಂಡವನ್ನೇ ಬಳಸಬಹುದು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಅದನ್ನು ತಮ್ಮ ರಾಜ್ಯದಲ್ಲಿ ಅಳವಡಿಸದಿರಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್