ರೈತರಿಗಾಗಿ ತಮಿಳುನಾಡು ಬಂದ್:ಡಿಎಂಕೆ ಕರೆಗೆ ಭರ್ಜರಿ ಪ್ರತಿಕ್ರಿಯೆ
Team Udayavani, Apr 25, 2017, 10:34 AM IST
ಚೆನ್ನೈ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಡಿಎಂಕೆ ಸೇರಿದಂತೆ ವಿಪಕ್ಷಗಳು ಕರೆ ನೀಡಿದ ತಮಿಳುನಾಡು ಬಂದ್ಗೆ ಇಂದು ಮಂಗಳವಾರ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯಾದ್ಯಂತ ಬಂದ್ ವಾತಾವರಣ ಕಂಡು ಬಂದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ರೈತ ಸಂಘಟನೆಗಳು, ವ್ಯಾಪಾರಿಗಳ ಸಂಘಟನೆಗಳು, ಲಾರಿ ಮಾಲಕರು, ಕಾಂಗ್ರೆಸ್, ಕಮ್ಯುನಿಷ್ಟ್ ಪಕ್ಷಗಳು, ಮುಸ್ಲಿಂ ಲೀಗ್ ಸೇರಿದಂತೆ ನೂರಾರು ಸಂಘಟನೆಗಳು ಬೆಂಬಲ ನೀಡಿದ್ದು ,ಬಂದ್ ಯಶಸ್ವಿ ಎನ್ನುವ ವಾತಾವರಣ ಬೆಳಗ್ಗೆಯೆ ಕಂಡು ಬಂದಿದೆ.
ಬರಗಾಲದ ಹಿನ್ನಲೆಯಲ್ಲಿ ಬೆಳೆವಿಮೆ, ಸಾಮಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಈಡೇರಿಸಲು ಪಟ್ಟು ಹಿಡಿಯಲಾಗಿದೆ. ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದು ಹಲವರನ್ನು ಬಂಧಿಸಲಾಗಿದೆ. ರೈತರೊಂದಿಗೆ ಪ್ರತಿಭಟನೆಗಿಳಿದ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ಅಂಗಡಿ ಮುಂಗಟ್ಟುಗಳು ಬಾಗಿಲು ತೆರೆಯದೆ ಬಂದ್ಗೆ ಬೆಂಬಲ ವ್ಯಕ್ತ ಪಡಿಸಿವೆ. ರಾಜ್ಯದೆಲ್ಲೆಡೆ ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು , ಸರ್ಕಾರಿ ಬಸ್ಗಳ ಸಂಚಾರ ವಿರಳವಾಗಿದೆ. ಆಟೋ , ಟ್ಯಾಕ್ಸಿಗಳು ಸಂಚರಿಸುತ್ತಿಲ್ಲ. ಬಸ್ಸ್ಟಾಂಡ್ಗಳು ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿವೆ.
ಚಿತ್ರರಂಗವೂ ಬಂದ್ಗೆ ಬೆಂಬಲ ನೀಡಿದ್ದು , ದಿನದ ಮಟ್ಟಿಗೆ ಚಿತ್ರೀಕರಣ ಸ್ಥಗಿತಗೊಳಿಸಿದೆ. ಚಿತ್ರಮಂದಿರಗಳಲ್ಲೂ 2 ಪ್ರದರ್ಶನಗಳನ್ನು ನಡೆಸದೇ ಪ್ರತಿಭಟನೆಗೆ ಬೆಂಬಲ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ