ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಚಿತ್ರೀಕರಣ; ಮೂವರು ಬಾಲಕರ ಬಂಧನ
ಪ್ರಿಯತಮನ ಜೊತೆಗಿರುವ ಫೋಟೋವನ್ನು ತೋರಿಸಿ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ.
Team Udayavani, Jul 9, 2022, 11:50 AM IST
ಚೆನ್ನೈ: ಸಹಪಾಠಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹತ್ತನೆ ತರಗತಿಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಅಮರನಾಥ ಯಾತ್ರೆಗೆ ತೆರಳಿದ ರಾಜ್ಯದ ಎಲ್ಲರೂ ಸುರಕ್ಷಿತವಾಗಿದ್ದಾರೆ: ಸಿಎಂ ಬೊಮ್ಮಾಯಿ
ಅತ್ಯಾಚಾರ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಇತರ ವಿದ್ಯಾರ್ಥಿಗಳ ಜೊತೆ ಆರೋಪಿಗಳು ಶೇರ್ ಮಾಡಿರುವುದಾಗಿ ವರದಿ ತಿಳಿಸಿದೆ. ಆರೋಪಿತ ಮೂವರು ಅಪ್ರಾಪ್ತ ವಿದ್ಯಾರ್ಥಿಗಳು ಕಡಲೂರು ಜಿಲ್ಲೆಯವರಾಗಿದ್ದಾರೆ. ಥಿಟ್ಟಾಕುಡಿ ಪೊಲೀಸ್ ಇನ್ಸ್ ಪೆಕ್ಟರ್ ಕೃಪಾ ಅವರು ನೀಡಿರುವ ಮಾಹಿತಿ ಪ್ರಕಾರ, ಸಂತ್ರಸ್ತ ವಿದ್ಯಾರ್ಥಿನಿ ಮತ್ತು ಆಕೆಯ ಪ್ರಿಯತಮನ ಜೊತೆಗಿರುವ ಫೋಟೋವನ್ನು ತೋರಿಸಿ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ.
ಇತ್ತೀಚೆಗೆ ಹಿರಿಯ ವಿದ್ಯಾರ್ಥಿಯೊಬ್ಬನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತನ ಮನೆಗೆ ತೆರಳಿದ್ದಳು. ಈ ಸಂದರ್ಭದಲ್ಲಿ ಆರೋಪಿಗಳಲ್ಲಿ ಒಬ್ಬ ವಿದ್ಯಾರ್ಥಿ, ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಒಟ್ಟಿಗೆ ನಿಂತಿರುವ ಪೋಟೋ ಸೆರೆ ಹಿಡಿದಿದ್ದ. ನಂತರ ಈ ಫೋಟೊವನ್ನು ಆಕೆಗೆ ತೋರಿಸಿ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದರು ಎಂದು ವರದಿ ವಿವರಿಸಿದೆ.
ಬ್ಲ್ಯಾಕ್ ಮೇಲ್ ನಿಂದ ವಿದ್ಯಾರ್ಥಿನಿ ಮಧ್ಯಾಹ್ನದ ಊಟದ ಸಮಯದಲ್ಲಿ ಶಾಲೆಯ ಹಿಂಭಾಗದಲ್ಲಿರುವ ಸಹಪಾಠಿ ವಿದ್ಯಾರ್ಥಿಯ ಮನೆಗೆ ತೆರಳಿದ್ದಳು. ಈ ಸಂದರ್ಭದಲ್ಲಿ ಮೂವರು ಸಹಪಾಠಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಇದರಲ್ಲಿ ಒಬ್ಬಾತ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಇತರ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅತ್ಯಾಚಾರ ಘಟನೆ ಬಗ್ಗೆ ಸಂತ್ರಸ್ತ ಬಾಲಕಿ ತಾಯಿ ಬಳಿ ಎಲ್ಲಾ ವಿಚಾರವನ್ನು ತಿಳಿಸಿದ್ದು, ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ನಿಟ್ಟಿನಲ್ಲಿ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ