ಚಿನ್ನಮ್ಮಗೆ ಗೇಟ್‌ಪಾಸ್‌ : ಪಕ್ಷದಲ್ಲಿ ದಿನಕರನ್‌ ಮೂಲೆಗುಂಪಿಗೆ


Team Udayavani, Apr 19, 2017, 2:46 AM IST

Shahshikala-600.jpg

ಚೆನ್ನೈ/ಹೊಸದಿಲ್ಲಿ: ಚಿನ್ನಮ್ಮ ಎಂದು ಕೊಂಡಾಡುತ್ತಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಮತ್ತು ಉಪ ಪ್ರಧಾನ ಕಾರ್ಯದರ್ಶಿ ಟಿ.ಟಿ.ವಿ. ದಿನಕರನ್‌ರನ್ನು ಪಕ್ಷದಿಂದ ಹೊರಹಾಕಲು ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಮಾಜಿ ಸಿಎಂ ಪನ್ನೀರ್‌ ಸೆಲ್ವಂ ಬಣಗಳು ನಿರ್ಧರಿಸಿವೆ. ಚೆನ್ನೈಯಲ್ಲಿ ಮಂಗಳವಾರ ರಾತ್ರಿ ನಡೆದ ಮೂರು ತಾಸುಗಳ ಬಿರುಸಿನ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಶಶಿಕಲಾ ಕುಟುಂಬ ಸದಸ್ಯರು ಪಕ್ಷದ ವ್ಯವಹಾರಕ್ಕೆ ಬರಲೇಬಾರದು ಎಂಬ ನಿರ್ಣಯವನ್ನೂ ಕೈಗೊಳ್ಳಲಾಗಿದೆ. ಜತೆಗೆ ಮಾಜಿ ಸಿಎಂ ಒ. ಪನ್ನೀರ್‌ ಸೆಲ್ವಂ ಬಣ ಮತ್ತು ಶಶಿಕಲಾ ಬೆಂಬಲಿಗರು ವಿಲೀನಗೊಳ್ಳುವ ಬಗ್ಗೆ ಮಾತುಕತೆಗಳು ಅಂತಿಮ ಹಂತದಲ್ಲಿವೆ. ಶಶಿಕಲಾ ಕುಟುಂಬವನ್ನು ಪಕ್ಷದಿಂದ ಹೊರ ಹಾಕಿದರಷ್ಟೇ ವಿಲೀನ ಸಾಧ್ಯ ಎಂಬ ಷರತ್ತು ಹಾಕಿದ್ದ ಮಾಜಿ ಸಿಎಂ ಒ. ಪನ್ನೀರ್‌ ಸೆಲ್ವಂ ಮೇಲುಗೈ ಸಾಧಿಸಿದ್ದಾರೆ.  ಇನ್ನು ಟಿ.ಟಿ.ವಿ. ದಿನಕರನ್‌ ಅವರಿಗೆ ಸಮನ್ಸ್‌ ಜಾರಿ ಮಾಡುವ ನಿಟ್ಟಿನಲ್ಲಿ ದಿಲ್ಲಿ ಪೊಲೀಸ್‌ ಇಲಾಖೆ ವಿಶೇಷ ತಂಡವನ್ನು ಕಳುಹಿಸಲಿದೆ.

ಎರಡೆಲೆ ಚಿಹ್ನೆಗಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ 50 ಕೋಟಿ ರೂ. ಲಂಚದ ಆಮಿಷ ನೀಡಿದ ಆರೋಪಕ್ಕೆ ಗುರಿಯಾದ ಬಳಿಕ ಎಐಎಡಿಎಂಕೆ ಯಲ್ಲಿ ಸೋಮವಾರ ಭಾರೀ ಬದಲಾವಣೆ ಕಂಡು ಬಂದಿತ್ತು. ದಿನಕರನ್‌ ಹಾಗೂ ಶಶಿಕಲಾ ವಿರುದ್ಧ ಎರಡೂ ಬಣಗಳ ನಾಯಕರು ಸಿಡಿದೆದ್ದಿದ್ದರು. ಅದಕ್ಕೆ ಪೂರಕವಾಗಿ ಮಂಗಳವಾರ ಚೆನ್ನೈಯಲ್ಲಿ ಬಿರುಸಿನ ಸಮಾಲೋಚನೆ ನಡೆಯಿತು. ಪಕ್ಷದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿ ಸ್ವಾಮಿ ನೇತೃತ್ವದಲ್ಲಿ ಎಲ್ಲ ಸಚಿವರೂ ಶಶಿಕಲಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಸಂದರ್ಭ ವಿ.ಕೆ. ಶಶಿಕಲಾ, ಟಿ.ಟಿ.ವಿ. ದಿನಕರನ್‌ ಮತ್ತು ಅವರ ಕುಟುಂಬ ಸದಸ್ಯರನ್ನು ಸದ್ಯ ಪಕ್ಷದಲ್ಲಿ ಮೂಲೆಗುಂಪು ಮಾಡುವುದು, ಬಳಿಕ ಅವರನ್ನು ಪಕ್ಷದಿಂದಲೇ ಹೊರಹಾಕುವ ನಿರ್ಧಾರಕ್ಕೆ ಬರಲಾಯಿತು ಎಂದು ತಮಿಳುನಾಡು ಹಣಕಾಸು ಸಚಿವ ಡಿ. ಜಯಕುಮಾರ್‌ ಸಭೆಯ ಬಳಿಕ ತಿಳಿಸಿದರು. 

‘ಪಕ್ಷದ ಎಲ್ಲ ಶಾಸಕರು, ಸಂಸದರು, ನಾಯಕರ ಆಗ್ರಹ ಒಂದೇ ಆಗಿದೆ. ಎಐಎಡಿಎಂಕೆಯ ನಿತ್ಯದ ವಹಿವಾಟಿಗಾಗಿ ಸಮಿತಿ ರಚಿಸಲಾಗುತ್ತದೆ’ ಎಂದು ಹೇಳಿದ್ದಾರೆ. ‘ನಮ್ಮ ಗುಂಪು ಮಾಜಿ ಸಿಎಂ ಪನ್ನೀರ್‌ ಸೆಲ್ವಂ ಬಣದ ಜತೆಗೆ ಮಾತುಕತೆಗೆ ಸಿದ್ಧವಾಗಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ಪಕ್ಷದ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯಕ್ಕೂ ಗೌರವ ಕೊಡುತ್ತೇವೆ’ ಎಂದರು ಜಯಕುಮಾರ್‌.

ಸದ್ಯ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವ ವಿ.ಕೆ. ಶಶಿಕಲಾ ಹೆಸ ರಿಗೆ ಮಾತ್ರ ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಮುಂದೆ ಅವರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ಬಾಕಿ ಇದೆ. ಅದು ಇತ್ಯರ್ಥವಾದ ಬಳಿಕ ಉಚ್ಚಾಟನೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಎಐಎಡಿಎಂಕೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.