ನಮ್ಮ ರಸ್ತೆ ಎಷ್ಟು ಕೆಟ್ಟದಾಗಿದೆಯೆಂದರೆ…: ಗಡ್ಕರಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್
Team Udayavani, Feb 12, 2023, 9:22 AM IST
ಚೆನ್ನೈ: “ನಮ್ಮ ರಸ್ತೆ ಎಷ್ಟು ಕೆಟ್ಟದಾಗಿದೆ ಎಂದರೆ ನಾನು ಕಾರು ಬಿಟ್ಟು ರೈಲಿನಲ್ಲಿ ಪ್ರಯಾಣ ಮಾಡಬೇಕಾಗಿದೆ..” ಇದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬರೆದ ಪತ್ರದ ಒಕ್ಕಣೆ.
ಚೆನ್ನೈ ಮತ್ತು ರಾಣಿಪೇಟ್ ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿ ಮಾಡಿಕೊಡಲು ಸ್ಟಾಲಿನ್ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.
ಈ ರಸ್ತೆ ವಿಭಾಗವು ಚೆನ್ನೈ ಮತ್ತು ಅದರ ಬಂದರುಗಳಿಂದ ಕಾಂಚೀಪುರಂ, ವೆಲ್ಲೂರು, ರಾಣಿಪೇಟ್, ಹೊಸೂರು ಮತ್ತು ಕೃಷ್ಣಗಿರಿಯ ಕೈಗಾರಿಕಾ ಕ್ಲಸ್ಟರ್ ಗಳಿಗೆ ಪ್ರಮುಖ ಸಂಪರ್ಕ ನೀಡುತ್ತದೆ ಎಂದು ಸ್ಟಾಲಿನ್ ಹೈಲೈಟ್ ಮಾಡಿದ್ದಾರೆ. ಡಿಎಂಕೆ ಸಂಸದ ದಯಾನಿಧಿ ಮಾರನ್ ಸಂಸತ್ತಿನಲ್ಲಿ ಮಾಡಿದ ಮನವಿಗೆ ಕೇಂದ್ರ ಸಚಿವರು ನೀಡಿದ ಉತ್ತರ ‘ಬಹಳ ಸಾಮಾನ್ಯವಾಗಿತ್ತು ಮತ್ತು ‘ಬದ್ಧತೆ ಇಲ್ಲ’ದ ಉತ್ತರವಾಗಿತ್ತು ಎಂದಿದ್ದಾರೆ.
ಇದನ್ನೂ ಓದಿ:ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ಇಂಡಿಯಾದಿಂದ ಬರೋಬ್ಬರಿ 500 ವಿಮಾನ ಖರೀದಿ
“ಸಂಸದ ಮಾರನ್ ಅವರು ಸಂಸತ್ತಿನಲ್ಲಿ ಮಾಡಿದ ಮನವಿಯನ್ನು ನಿಮ್ಮ ಗಮನಕ್ಕೆ ತರಲು ಇಚ್ಚಿಸುತ್ತೇನೆ. ಈ ವಿಭಾಗವು ಚೆನ್ನೈ ನಗರ ಮತ್ತು ಅದರ ಬಂದರುಗಳಿಂದ ಕಾಂಚೀಪುರಂ, ವೆಲ್ಲೂರು, ರಾಣಿಪೇಟ್, ಹೊಸೂರು ಮತ್ತು ಕೃಷ್ಣಗಿರಿಯ ಕೈಗಾರಿಕಾ ಸಮೂಹಗಳಿಗೆ ಪ್ರಮುಖ ಸಂಪರ್ಕವನ್ನು ಒದಗಿಸುತ್ತದೆ. ರಸ್ತೆಯ ಸ್ಥಿತಿ ಎಷ್ಟು ಕೆಟ್ಟದಾಗಿದೆ ಎಂದರೆ ನಾನು ರೈಲಿನಲ್ಲಿ ಕೆಲವು ಜಿಲ್ಲೆಗಳಿಗೆ ನನ್ನ ಇತ್ತೀಚಿನ ಭೇಟಿಗಳನ್ನು ಯೋಜಿಸಬೇಕಾಗಿತ್ತು. ನಮ್ಮ ಸಂಸದರ ವಿನಂತಿಯು ಈ ಪ್ರಮುಖ ರಸ್ತೆಯಲ್ಲಿ ಬಹಳ ನಿರ್ದಿಷ್ಟವಾಗಿದ್ದರೂ, ನಿಮ್ಮ ಉತ್ತರದಿಂದ ನಾವು ನಿರಾಶೆಗೊಂಡಿದ್ದೇವೆ” ಎಂದು ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ