
ಅದೃಷ್ಟ ಬಲ…ಮನೆಯೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟ, 10 ತಿಂಗಳ ಮಗು ಸೇರಿ ಮೂವರು ಪಾರು
ಅಷ್ಟರಲ್ಲಿ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ಮನೆ ಸುಟ್ಟು ಭಸ್ಮವಾಗಿ ಹೋಗಿರುವುದಾಗಿ ವರದಿ ತಿಳಿಸಿದೆ.
Team Udayavani, Apr 1, 2022, 4:10 PM IST

ಚೆನ್ನೈ: ಮನೆಯ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಳ್ಳುವ ವೇಳೆ ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಮಿಳುನಾಡಿನ ಕಲ್ಲಕುರುಚಿ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಆರ್ ಡಿಎಕ್ಸ್ ಸ್ಫೋಟಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹತ್ಯೆಗೆ ಸಂಚು; ಎನ್ಐಎ ತನಿಖೆ
ಕಲ್ಲಕುರುಚಿ ಜಿಲ್ಲೆಯ ಕಲ್ವರಾಯನ ಬೆಟ್ಟದ ತಪ್ಪಲಿನ ಪ್ರದೇಶದಲ್ಲಿರುವ ಬುಡಕಟ್ಟು ನಿವಾಸಿಯ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಮನೆ ಮಾಲೀಕ ರಾಜಾ, ಆತನ ಪತ್ನಿ ಹಾಗೂ ಹತ್ತು ತಿಂಗಳ ಹಸುಗೂಸು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿ ವಿವರಿಸಿದೆ.
ವರದಿಗಳ ಪ್ರಕಾರ, ಕಳೆದ ರಾತ್ರಿ ರಾಜಾ ಪತ್ನಿ ಗ್ಯಾಸ್ ಒಲೆ ಮೇಲೆ ಹಾಲನ್ನು ಇಟ್ಟು ಕುದಿಸುತ್ತಿದ್ದರು. ನಂತರ ಆಕೆ ಪಕ್ಷದ ಮನೆಗೆ ತೆರಳಿದ್ದಳು. ಆದರೆ ಆಕೆ ಗ್ಯಾಸ್ ಒಲೆ ಮೇಲೆ ಹಾಲು ಕುದಿಯುತ್ತಿರುವುದು ಮರೆತು ಬಿಟ್ಟಿದ್ದಳು. ಅದರ ಪರಿಣಾಮ ಹುಲ್ಲಿನ ಮನೆಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಅಪಾಯ ಅರಿತ ರಾಜಾ, ಮಗು, ಪತ್ನಿ ಹಾಗೂ ನೆರೆಹೊರೆಯವರು ಮನೆ ಬಿಟ್ಟು ದೂರ ಹೋಗಿದ್ದು, ಅಷ್ಟರಲ್ಲಿ ಮನೆಯೊಳಗಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು, ಮನೆ ಸುಟ್ಟು ಭಸ್ಮವಾಗಿ ಹೋಗಿರುವುದಾಗಿ ವರದಿ ತಿಳಿಸಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟಗೊಳ್ಳುವ ಹೊತ್ತಿನಲ್ಲಿ ಯಾರು ಇಲ್ಲದಿದ್ದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ

ಆನ್ ಲೈನ್ ಕ್ಲಾಸ್ ನಡೆಯುತ್ತಿರುವಾಗಲೇ ಶಿಕ್ಷಕನ ಕತ್ತು ಹಿಸುಕಿ ಕೊಲೆಗೈದ ದುಷ್ಕರ್ಮಿಗಳು

ಜಮ್ಮು-ಕಾಶ್ಮೀರ: ಗುಲ್ಮಾರ್ಗ್ನಲ್ಲಿ ಭಾರೀ ಹಿಮಪಾತ; ಇಬ್ಬರು ವಿದೇಶಿ ಪ್ರವಾಸಿಗರು ಮೃತ್ಯು

ಕೇಂದ್ರ ಬಜೆಟ್ 2023: ”ಇದು ಚುನಾವಣೆಗಾಗಿ” ಎಂದು ಖರ್ಗೆ ಸೇರಿ ಹಲವು ವಿಪಕ್ಷಗಳ ಟೀಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ