ಪ್ರಧಾನಿ ಮೋದಿಗೆ ದೇವಸ್ಥಾನ ನಿರ್ಮಿಸಿದ ತಮಿಳುನಾಡು ರೈತ
Team Udayavani, Dec 25, 2019, 9:32 PM IST
ತಿರುಚಿರಾಪಳ್ಳಿ: ತಮಿಳುನಾಡಿನ ಎರ್ಕುಡಿ ಗ್ರಾಮದ ರೈತರೊಬ್ಬರು ತಮ್ಮ ಜಮೀನಿನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ದೇವಸ್ಥಾನವೊಂದನ್ನು ನಿರ್ಮಿಸಿದ್ದಾರೆ. ಈ ದೇವಸ್ಥಾನ ಕಳೆದ ವಾರ ಉದ್ಘಾಟನೆಯಾಗಿದೆ.
ದೇವಸ್ಥಾನದಲ್ಲಿ ಮೋದಿಗೆ ಪ್ರತಿದಿನ ಆರತಿ ಬೆಳಗಲಾಗುತ್ತದೆ ಎನ್ನಲಾಗಿದೆ. ರೈತ ಪಿ.ಶಂಕರ್(50) ಪ್ರಧಾನಿ ಮೋದಿಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಉಜ್ವಲಾ ಯೋಜನೆ, ಶೌಚಾಲಯ ಯೋಜನೆಯ ಫಲಾನುಭವಿ ಮತ್ತು ಅಭಿಮಾನಿ. ಈ ಎಲ್ಲಾ ಅನುಕೂಲಗಳನ್ನು ಮಾಡಿಕೊಟ್ಟ ಕಾರಣ ಅವರು ಮೋದಿಯನ್ನು ಪೂಜಿಸುವುದಾಗಿ ಹೇಳಿದ್ದಾರೆ. ಈ ದೇವಸ್ಥಾನ 8 * 8 ಅಡಿ ಜಾಗದಲ್ಲಿ ನಿರ್ಮಿಸಲಾಗಿದೆ. ಮೋದಿಯವರ ಪುತ್ಥಳಿಯನ್ನು ಮಧ್ಯಭಾಗದಲ್ಲಿ ಇರಿಸಲಾಗಿದೆ. ಪುತ್ಥಳಿಯ ಎರಡೂ ಬದಿ ದೀಪಗಳನ್ನು ಇರಿಸಲಾಗಿದೆ. ಹಣೆಗೆ ತಿಲಕ ಇಡಲಾಗಿದೆ. 1.2 ಲಕ್ಷ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ ಎಂದು ಶಂಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ