ಪ್ರತೀಕಾರಕ್ಕೆ ಪಿಎಫ್ಐ ಸಜ್ಜು; ತಮಿಳುನಾಡಿನ 7 ಸ್ಥಳಗಳಲ್ಲಿ ಹಿಂದೂ ಮುಖಂಡರ ಮೇಲೆ ದಾಳಿ


Team Udayavani, Sep 26, 2022, 7:15 AM IST

ಪ್ರತೀಕಾರಕ್ಕೆ ಪಿಎಫ್ಐ ಸಜ್ಜು; ತಮಿಳುನಾಡಿನ 7 ಸ್ಥಳಗಳಲ್ಲಿ ಹಿಂದೂ ಮುಖಂಡರ ಮೇಲೆ ದಾಳಿ

ಚೆನ್ನೈ/ಕಣ್ಣೂರು: ಘಾತಕ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಹಿನ್ನೆಲೆಯಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಮೇಲೆ ಎನ್‌ಐಎ ದಾಳಿ ನಡೆಸಿದ್ದಕ್ಕೆ ಪ್ರತೀಕಾರ ಎಂಬಂತೆ ಹಲವು ದಾಳಿಗಳು ನಡೆಯಲಾರಂಭಿಸಿದೆ.

ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡು ಏಳು ಕಡೆಗಳಲ್ಲಿ ದಾಳಿ ನಡೆಸಿದೆ.

ಕನ್ಯಾಕುಮಾರಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮನೆ ಮೇಲೆ ಇಬ್ಬರು ಕಿಡಿಗೇಡಿಗಳು ಪೆಟ್ರೋಲ್‌ ಬಾಂಬ್‌ ಎಸೆದಿದ್ದಾರೆ. ಇಷ್ಟು ಮಾತ್ರವಲ್ಲದೆ, ಮನೆಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಧ್ವಂಸಗೊಳಿಸಿದ್ದಾರೆ.

ದಿಂಡಿಗಲ್‌, ಚೆಂಗಲ್‌ಪೇಟ್‌ ಜಿಲ್ಲೆಗಳಲ್ಲಿಯೂ ಕೂಡ ಹಿಂದೂ ಮುಖಂಡರ ಮೇಲೆ ದಾಳಿ ನಡೆಸಲಾಗಿದೆ. ಚೆನ್ನೈನ ತಾಂಬರಂನಲ್ಲಿ ಆರ್‌ಎಸ್‌ಎಸ್‌ ಮುಖಂಡ ಸೀತಾರಾಮನ್‌ ಎಂಬುವರ ನಿವಾಸದ ಮೇಲೆ ಕೂಡ ಪೆಟ್ರೋಲ್‌ ಬಾಂಬ್‌ ಎಸೆಯಲಾಗಿದೆ.

ಸೇಲಂನಲ್ಲಿ:
ಸೇಲಂ ಜಿಲ್ಲೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರ ನಿವಾಸದ ಮೇಲೆ ಸೀಮೆ ಎಣ್ಣೆ ತುಂಬಿದ ಬಾಟಲಿಯನ್ನು ಎಸೆಯಲಾಗಿದೆ. ಇಬ್ಬರು ವ್ಯಕ್ತಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಯನ್ನು ಅವರ ಮನೆಯ ಬಾಗಿಲಲ್ಲಿ ಇರಿಸಿದ್ದರು. ಪ್ರಕರಣದ ಬಗ್ಗೆ ಕೇಸು ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ಪಿಎಫ್ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಂಧನ ಖಂಡಿಸಿ ಎಸ್‌ಡಿಪಿಐ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಪೊಲೀಸ್‌ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಸಿಸಿಟಿವಿ ದೃಶ್ಯಾವಳಿಯಲ್ಲಿ ಇಬ್ಬರು ವ್ಯಕ್ತಿಗಳು ಆರ್‌ಎಸ್‌ಎಸ್‌ ಮುಖಂಡರ ನಿವಾಸದ ಸುತ್ತ ಸಂಶಯಾಸ್ಪದವಾಗಿ ತಿರುಗಾಡುತ್ತಾ ಇದ್ದದ್ದು ದೃಢಪಟ್ಟಿದೆ. ಕೂಡಲೇ ಅವರು ಸೀಮೆ ಎಣ್ಣೆ ತುಂಬಿದ ಬಾಟಲಿಯನ್ನು ಮನೆಯ ಬಾಗಿಲಲ್ಲಿ ಇರಿಸಿದ್ದು ಕಂಡುಬಂದಿದೆ.

ದಾಖಲೆ ಪತ್ತೆ:
ಇನ್ನೊಂದೆಡೆ, ಕೋಲ್ಕತಾದಲ್ಲಿ ಇರುವ ಪಿಎಫ್ಐ ಕಚೇರಿಯ ಮೇಲೆ ಎನ್‌ಐಎ ಶನಿವಾರ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಹಲವಾರು ದಾಖಲೆಗಳು, ಮೊಬೈಲ್‌ ಫೋನ್‌ಗಳು, ಬಂಗಾಳಿ ಭಾಷೆಯಲ್ಲಿ ಮುದ್ರಿಸಲಾಗಿರುವ ಕೈಪಿಡಿಯನ್ನು ವಶಪಡಿಸಿಕೊಳ್ಳಲಾಗಿದೆ. “ಒಂದಲ್ಲ ಒಂದು ದಿನ ಬಾಬರಿ ಎದ್ದೇಳಲಿದೆ’ ಎಂದು ಅರೆಬಿಕ್‌, ಉರ್ದು ಭಾಷೆಯಲ್ಲಿ ಬರೆಯಲಾಗಿರುವ ಅಂಶಗಳು ಪತ್ತೆಯಾಗಿವೆ. ಜತೆಗೆ ಆರ್‌ಎಸ್‌ಎಸ್‌, ಇ.ಡಿ.ದೂಷಿಸಿರುವ ಬರಹಗಳೂ ಲಭ್ಯವಾಗಿವೆ.

ಕಣ್ಣೂರಲ್ಲಿ ಪೊಲೀಸರ ದಾಳಿ
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆಯ ಜತೆಗೆ ಗುರುತಿಸಿಕೊಂಡಿದೆ ಎಂದು ಹೇಳಲಾಗಿರುವ ಹಲವು ಮಳಿಗೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಳಿಗೆಗಳಿಂದ ಲ್ಯಾಪ್‌ಟಾಪ್‌ ಗಳು, ಸಿಪಿಯು, ಮೊಬೈಲ್‌ ಫೋನ್‌ಗಳು, ಹಣಕಾಸು ವಹಿವಾಟು ನಡೆಸಲಾಗಿದೆ ಎಂದು ಹೇಳಲಾಗಿರುವ ಬಗ್ಗೆ ಹಲವು ದಾಖಲೆಗಳನ್ನು ಈ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ. ಕೇರಳದಲ್ಲಿ ಹಿಂಸಾತ್ಮಕ ಚಟುವಟಿಕೆಗಳನ್ನು ನಡೆಸಲು ಪಿಎಫ್ಐ ಮುಂದಾಗಿದೆ ಎಂದು ಖುದ್ದು ಸಿಎಂ ಪಿಣರಾಯಿ ವಿಜಯನ್‌ ಆರೋಪಿಸಿದ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದೆ.

ಪೊಲೀಸರ ಎಚ್ಚರಿಕೆ:
ಹಿಂದೂ ಮುಖಂಡರ ಮೇಲೆ ದಾಳಿ ನಡೆಸಿ, ಕಿಡಿಗೇಡಿತನದ ಕೃತ್ಯಗಳನ್ನು ನಡೆಸುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿಯಲ್ಲಿ ಕೇಸು ದಾಖಲಿಸುವ ಬಗ್ಗೆ ತಮಿಳುನಾಡು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿನ ಮದುರೈ, ಸೇಲಂ, ಕನ್ಯಾಕುಮಾರಿಯಲ್ಲಿ ಹಿಂದೂ ಮುಖಂಡರ ನಿವಾಸದ ಮೇಲೆ ದಾಳಿ ನಡೆಸಿದ ಪ್ರಕರಣ ನಡೆದಿದ್ದು, ತನಿಖೆಯೂ ಮುಂದುವರಿದಿದೆ. 250ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. ಜತೆಗೆ ಹಲವರನ್ನು ಬಂಧಿಸಲಾಗಿದೆ ಎಂದು ತಮಿಳುನಾಡು ಡಿಜಿಪಿ ಸಿ.ಶೈಲೇಂದ್ರ ಬಾಬು ಎಚ್ಚರಿಸಿದ್ದಾರೆ. ದಾಳಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೊಯಮತ್ತೂರಿನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ಪಡೆ, ತಮಿಳುನಾಡು ಪೊಲೀಸ್‌ ಪಡೆಯ ವಿಶೇಷ ಕಮಾಂಡೋ ಪಡೆಗಳನ್ನು ನಗರದ ಆಯಕಟ್ಟಿನ ಸ್ಥಳದಲ್ಲಿ ನಿಯೋಜಿಸಲಾಗಿದೆ.

ಪಿಎಫ್ಐ ಮೇಲೆ ಎನ್‌ಐಎ ದಾಳಿ ನಡೆಸಿದ ಬಳಿಕ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ. ತಮಿಳುನಾಡು ಪೊಲೀಸರು ಏನು ಕ್ರಮ ಕೈಗೊಂಡಿದ್ದಾರೆ.
-ಕೆ.ಅಣ್ಣಾಮಲೈ, ತಮಿಳುನಾಡು ಬಿಜೆಪಿ ಅಧ್ಯಕ್ಷ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.