
ತಮಿಳುನಾಡು: ನಡು ರಸ್ತೆಯಲ್ಲೇ ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ಮುಖಂಡನ ಥಳಿಸಿ ಹತ್ಯೆ
Team Udayavani, Feb 1, 2023, 11:14 AM IST

ಚೆನ್ನೈ: ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ಹಿರಿಯ ಮುಖಂಡನನ್ನು ಥಳಿಸಿ ಹತ್ಯೆಗೈದಿರುವ ಘಟನೆ ಮಧುರೈನಲ್ಲಿ ಮಂಗಳವಾರ ರಾತ್ರಿ (ಜ.31 ರಂದು) ನಡೆದಿದೆ.
ಆಭರಣ ಅಂಗಡಿಯ ಮಾಲೀಕ ಮತ್ತು ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ದಕ್ಷಿಣ ಮಧುರೈನ ಉಪ ಕಾರ್ಯದರ್ಶಿಯಾಗಿದ್ದ ಮಣಿಕಂಠನ್ (40) ಕೊಲೆಯಾದ ವ್ಯಕ್ತಿ.
ಮಣಿಕಂಠನ್ ತನ್ನ ಅಂಗಡಿಯ ಬಳಿ ನಡೆದುಕೊಂಡು ಹೋಗುತ್ತಿರುವ ವೇಳೆ ಇಬ್ಬರು ಅಪರಿಚಿತರು ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಈ ವೇಳೆ ಕಲ್ಲುಗಳು ಮತ್ತು ಕುಡುಗೋಲಿನಿಂದ ಮಣಿಕಂಠನ್ ಅವರ ಮೇಲೆ ತೀವ್ರವಾದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡ ಮಣಿಕಂಠನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಜೈಹಿಂದಪುರಂ ಪೊಲೀಸ್ ಠಾಣಾ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್ ಅಬ್ಬರ