ಕೋವಿಡ್ ನಿಂದ ದೂರವಿರಲು ಹಾವು ತಿಂದ ತಮಿಳುನಾಡಿನ ವ್ಯಕ್ತಿಯ ಬಂಧನ
Team Udayavani, May 28, 2021, 11:13 AM IST
ಚೆನ್ನೈ: ಕೋವಿಡ್ 19 ಸೋಂಕು ತಾಗಬಾರದು ಎಂಬ ಉದ್ದೇಶದಿಂದ ಹಾವೊಂದನ್ನು ತಿಂದ ತಮಿಳುನಾಡಿನ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ತಿರುನೆಲ್ವೇಲಿ ಜಿಲ್ಲೆಯ ಪೆರುಮಲ್ಪತ್ತಿ ಗ್ರಾಮದ ವಡಿವೇಲ್ ಎಂಬಾತನೇ ಹಾವು ತಿಂದ ಭೂಪ. ತಾನು ಹಾವು ತಿನ್ನುವುದನ್ನು ವಿಡಿಯೋ ಮಾಡಿಸಿರುವ ಈತ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾನೆ.
ಇದನ್ನೂ ಓದಿ:ಸೆಕ್ಯೂರಿಟಿ ಗಾರ್ಡ್ ನ ಕೈ-ಕಾಲು ಕಟ್ಟಿ ನಾಲ್ಕೂವರೆ ಲಕ್ಷ ರೂ. ಮೌಲ್ಯದ ಮದ್ಯ ಕದ್ದ ಖದೀಮರು
ವಿಡಿಯೋ ವೈರಲ್ ಆಗುತ್ತಿದ್ದಂತೆ ಪರಿಸರ ಪ್ರೇಮಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಡಿವೇಲ್ ನನ್ನು ಬಂಧಿಸಿದ್ದು, 7500 ರೂ. ದಂಡ ವಿಧಿಸಿದ್ದಾರೆ.
ಈತ ತನ್ನ ಗದ್ದೆಯಲ್ಲಿ ಸಿಕ್ಕ ಹಾವನ್ನು ಹಿಡಿದಿದ್ದಾನೆ. ಹಾವನ್ನು ಕೊಂದು ನಂತರ ಅದನ್ನು ತಿಂದಿದ್ದಾನೆ. ಕೋವಿಡ್ ವೈರಸ್ ನ್ನು ದೂರವಿಡಲು ಸರಿಸೃಪಗಳ ಭಕ್ಷಣೆ ಉತ್ತಮ ಎಂದು ವಡಿವೇಲ್ ವಿಡಿಯೋದಲ್ಲಿ ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!