Michong ಅಬ್ಬರಕ್ಕೆ ನಲುಗಿದ ತಮಿಳುನಾಡು: 2015ರ ಜಲಪ್ರಳಯ ನೆನಪಿಸಿದ ಚೆನ್ನೈ ಮಳೆ
Team Udayavani, Dec 5, 2023, 12:08 AM IST
ಚೆನ್ನೈ: ಮಿಚಾಂಗ್ ಚಂಡಮಾರುತದ ಅಬ್ಬರವು ತಮಿಳುನಾಡಿಗೆ ದುಃಸ್ವಪ್ನವಾಗಿ ಕಾಡುತ್ತಿದ್ದು, ರವಿವಾರ ರಾತ್ರಿ ಬೆಳಗಾಗುವಷ್ಟರಲ್ಲಿ ಸುರಿದ ಮಳೆಯು 2015ರ ಜಲಪ್ರಳಯವನ್ನು ನೆನಪಿಸಿದೆ.
ಬಂಗಾಲ ಕೊಲ್ಲಿಯಲ್ಲಿ ಎದ್ದಿರುವ ಮಿಚಾಂಗ್ ಸೈಕ್ಲೋನ್ ಮಂಗಳವಾರ ಮಧ್ಯಾಹ್ನ ನೆಲ್ಲೂರು ಮತ್ತು ಮಚಲಿಪಟ್ಟಣಂ ಮಧ್ಯೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಧಾರಾಕಾರ ಮಳೆಯಿಂದಾಗಿ ತಮಿಳುನಾಡಿನಲ್ಲಿ ಒಟ್ಟು ಐವರು ಅಸುನೀಗಿದ್ದಾರೆ. ಮಿಚಾಂಗ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆಯು ತನ್ನ 21 ತಂಡಗಳನ್ನು ತ.ನಾಡು, ಆಂಧ್ರ ಮತ್ತು ಪುದುಚೇರಿಯಲ್ಲಿ ನಿಯೋಜಿಸಿದೆ. 8 ಹೆಚ್ಚುವರಿ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಸರಕಾರವು ಮಂಗಳವಾರ ಸರಕಾರಿ ರಜೆ ಘೋಷಿಸಿದೆ. ಚೆನ್ನೈ, ಕಾಂಚಿಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳು, ಸರಕಾರಿ ಕಚೇರಿಗಳಿಗೆ ಸೋಮವಾರವೂ ರಜೆ ಘೋಷಿಸಲಾಗಿತ್ತು.
ವಿಮಾನ ನಿಲ್ದಾಣಕ್ಕೂ ನುಗ್ಗಿದ ನೀರು: ಭಾರೀ ಮಳೆಯಿಂದ ಚೆನ್ನೈ ವಿಮಾನ ನಿಲ್ದಾಣದ ರನ್ವೇ ಜಲಾವೃತವಾಗಿದೆ. ವಿಮಾನಗಳ ಸಂಚಾರವೂ ಅಸ್ತವ್ಯಸ್ತವಾಗಿದೆ. 70 ವಿಮಾನಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಹಲವು ವಿಮಾನಗಳ ಪಥ ಬದಲಿಸಲಾಗಿದೆ. ಕೆಲವು ವಿಮಾನಗಳ ಮಾರ್ಗ ಬದಲಿಸಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೆಡೆಗೆ ಕಳುಹಿಸಲಾಗಿದೆ. ಪ್ರಯಾಣಿಕರ ಸುರಕ್ಷೆ ಹಿನ್ನೆಲೆಯಲ್ಲಿ ತ.ನಾಡಿನಾದ್ಯಂತ ರೈಲುಗಳ ಸೇವೆಗಳನ್ನು ರದ್ದು ಮಾಡಲಾಗಿದೆ.
ಕೊಚ್ಚಿ ಹೋದ ಕಾರುಗಳು: ಭಾರೀ ಮಳೆಯಿಂದ ಚೆನ್ನೈಯ ರಸ್ತೆಗಳೆಲ್ಲ ಜಲಾವೃತವಾಗಿದ್ದು, ಕಾರು ಸೇರಿದಂತೆ ರಸ್ತೆಗಳಲ್ಲಿ ನಿಲ್ಲಿಸಿದ್ದ ಹಲವಾರು ವಾಹನಗಳು ಕೊಚ್ಚಿಹೋಗುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದರ ಜತೆಗೆ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಮೊಸಳೆಯೊಂದು ರಸ್ತೆಗೆ ಬಂದಿರುವ ವೀಡಿಯೋ ಕೂಡ ಜಾಲತಾಣಗಳಲ್ಲಿ ಹರಿದಾಡಿ ಜನರನ್ನು ಬೆಚ್ಚಿ ಬೀಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ