ತಮಿಳುನಾಡು: ಮಗುವಿಗೆ ಜನ್ಮ ನೀಡಿದ ಪ್ರಥಮ ಪಿಯು ವಿದ್ಯಾರ್ಥಿನಿ
ಪೆನ್ನಿನಿಂದ ಹೊಕ್ಕುಳಬಳ್ಳಿಯನ್ನು ಕತ್ತರಿಸಿ ಮಗುವಿನ ಶವ ಶಾಲೆಯ ಶೌಚಾಲಯದ ಬಳಿ ಎಸೆದಳು
Team Udayavani, Sep 7, 2022, 8:54 PM IST
ಚೆನ್ನೈ: ತಮಿಳುನಾಡಿನ ಚಿದಂಬರಂ ಬಳಿಯ ಸರ್ಕಾರಿ ಶಾಲೆಯ ಪ್ರಥಮ ಪಿಯು ವಿದ್ಯಾರ್ಥಿನಿಯೊಬ್ಬಳಿಗೆ ಹೆರಿಗೆಯಾಗಿದ್ದು, ಮಗುವಿನ ಶವವನ್ನು ಶಾಲೆಯ ಶೌಚಾಲಯದ ಬಳಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆಯ ಕುರಿತು ಕಡಲೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಪ್ರಾಪ್ತ ಬಾಲಕಿ ಗರ್ಭಧರಿಸಲು ಕಾರಣರಾದವರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಾಲೆಯ ಶೌಚಾಲಯದ ಬಳಿ ಶಿಶುವಿನ ಶವವನ್ನು ಶಾಲಾ ಅಧಿಕಾರಿಗಳು ಕಂಡು ಭುವನಗಿರಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತನಿಖೆ ಆರಂಭಿಸಿದ್ದು, ಪತ್ತೆಯಾಗಿದ್ದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವುದಾಗಿ ಒಪ್ಪಿಕೊಂಡಿದ್ದಾಳೆ.ಹೊಟ್ಟೆ ನೋವು ಕಾಣಿಸಿಕೊಂಡು ಶೌಚಾಲಯಕ್ಕೆ ಹೋಗಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಹೇಳಿದ್ದಾಳೆ. ಯಾವುದೇ ಸಹಾಯವಿಲ್ಲದೆ ಹೆರಿಗೆ ಮಾಡಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಪೆನ್ನಿನಿಂದ ಹೊಕ್ಕುಳಬಳ್ಳಿಯನ್ನು ಕತ್ತರಿಸಿ ಮತ್ತೆ ತರಗತಿಗೆ ಬಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ತಾನು ಗರ್ಭಿಣಿಯಾಗಿರುವ ವಿಚಾರವನ್ನು ಶಾಲೆಯಲ್ಲಿ ಅಥವಾ ಕುಟುಂಬದಲ್ಲಿ ಯಾರಿಗೂ ಹೇಳಿಲ್ಲ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಆಕೆ ಗರ್ಭಧರಿಸಲು ಕಾರಣವಾದ ವ್ಯಕ್ತಿಯ ಪತ್ತೆಗಾಗಿ ಆಕೆಯ ಸಂಬಂಧಿಕರು ಮತ್ತು ಸ್ಥಳೀಯ ಜನರು ಸೇರಿದಂತೆ ಹಲವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ