Tamil Nadu: ದಲಿತ ಮಹಿಳೆ ತಯಾರಿಸಿದ ಉಪಹಾರವನ್ನು ಸೇವಿಸಲು ನಿರಾಕರಿಸಿದ ವಿದ್ಯಾರ್ಥಿಗಳು
Team Udayavani, Sep 6, 2023, 12:29 PM IST
ಚೆನ್ನೈ: ದಲಿತ ಮಹಿಳೆ ಉಪಹಾರವನ್ನು ತಯಾರಿಸಿದರೆಂದು ಶಾಲಾ ಮಕ್ಕಳು ಆಹಾರವನ್ನು ಸೇವಿಸಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ತಮಿಳುನಾಡಿನ ಕರೂರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯ ಸರ್ಕಾರದ ಉಚಿತ ಉಪಹಾರ ಯೋಜನೆಯಡಿಯಲ್ಲಿ ತಯಾರಾದ ಬೆಳಗಿನ ತಿಂಡಿಯನ್ನು 15 ವಿದ್ಯಾರ್ಥಿಗಳು ಸೇವಿಸಲು ನಿರಕಾರಿಸಿದ್ದಾರೆ. ದಲಿತ ಮಹಿಳೆಯೊಬ್ಬರು ಅಡುಗೆ ಮಾಡಿದ್ದರಿಂದ ವಿದ್ಯಾರ್ಥಿಗಳು ಆಹಾರವನ್ನು ಸೇವಿಸಲು ನಿರಾಕರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಮಾಹಿತಿ ತಿಳಿದು ಶಾಲೆಗೆ ಜಿಲ್ಲಾಧಿಕಾರಿ ಟಿ ಪ್ರಭು ಶಂಕರ್ ಭೇಟಿ ನೀಡಿದ್ದಾರೆ. ಪೋಷಕರಿಗೆ ಈ ಬಗ್ಗೆ ಮನವರಿಕೆ ಮಾಡಿ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸಂಭಾವ್ಯ ಕಾನೂನು ಕ್ರಮದ ಎಚ್ಚರಿಕೆ ನೀಡದ್ದಾರೆ.
ದಲಿತ ಮಹಿಳೆಯಾಗಿರುವ ಸುಮತಿ ಎನ್ನುವವರು ಆಹಾರವನ್ನು ತಯಾರಿಸುತ್ತಿದ್ದಾರೆ. ಅವರು ಅಡುಗೆಯನ್ನು ಮಾಡುವವರೆಗೆ ನಮ್ಮ ಮಕ್ಕಳು ಆಹಾರವನ್ನು ಸೇವಿಸುವುದಿಲ್ಲ. ಶಾಲೆಯವರು ಒತ್ತಾಯಿಸಿದರೆ, ತಮ್ಮ ಮಕ್ಕಳನ್ನು ಶಾಲೆಯಿಂದ ಹೊರಗೆ ಕರೆದೊಯ್ಯಲು ಸಿದ್ಧರಿದ್ದಾರೆ ಎಂದು ಪೋಷಕರು ಜಿಲ್ಲಾಧಿಕಾರಿ ಬಳಿ ಹೇಳಿದ್ದಾರೆ.
ಇದನ್ನೂ ಓದಿ: Uttar Pradesh: ಪ್ರಾರ್ಥನೆ ಈಡೇರದಿದ್ದಕ್ಕೆ ಶಿವಲಿಂಗವನ್ನೇ ಕದ್ದ ಯುವಕ…ಕಾರಣವೇನು ಗೊತ್ತಾ?
ತಮಿಳುನಾಡಿನ ಕರೂರ್ ಜಿಲ್ಲೆಯ ವೇಲನ್ ಚೆಟ್ಟಿಯಾರ್ ಪಂಚಾಯತ್ ಯೂನಿಯನ್ ಶಾಲೆಯಲ್ಲಿ ಓದುತ್ತಿರುವ 30 ವಿದ್ಯಾರ್ಥಿಗಳ ಪೈಕಿ 15 ವಿದ್ಯಾರ್ಥಿಗಳು ಉಪಾಹಾರ ಸೇವಿಸಲು ನಿರಾಕರಿಸಿದ್ದು, ಈ ಕುರಿತು ಜಿಲ್ಲಾಡಳಿತಕ್ಕೆ ದೂರು ನೀಡಲಾಗಿದೆ.
ಯೋಜನಾ ನಿರ್ದೇಶಕ ಶ್ರೀನಿವಾಸನ್ ಅವರು ಕೂಡ ಪೋಷಕರ ಬಳಿ ಮಕ್ಕಳಿಗೆ ಆಹಾರವನ್ನು ಸೇವಿಸಲು ಹೇಳಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ಅದರೆ ಪೋಷಕರು ಅವರ ಮನವಿಗೆ ಸ್ಪಂದಿಸಿಲ್ಲ. 15 ವಿದ್ಯಾರ್ಥಿಗಳಲ್ಲಿ ಇಬ್ಬರು ಮಾತ್ರ ಉಪಹಾರವನ್ನು ಸೇವಿಸುತ್ತಿದ್ದಾರೆ. ಇದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಕ್ಕೆ ಕಾರಣವಾಗಿದೆ.
ಸದ್ಯ ಜಿಲ್ಲಾಡಳಿತವು ಈ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿ, ಎಲ್ಲರೂ ಉಪಹಾರವನ್ನು ಸೇವಿಸುವಂತೆ ಹೇಳಿದೆ. ಇದನ್ನು ಕೇಳದವರಿಗೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ.
ರಾಜ್ಯದ ಪ್ರಾಥಮಿಕ ಸರ್ಕಾರಿ ಶಾಲೆಗಳಲ್ಲಿ 15.75 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಉಪಹಾರ ನೀಡುವ ಯೋಜನೆಯನ್ನು ಆಗಸ್ಟ್ 25 ರಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಉದ್ಘಾಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ