
ಅಂಗಡಿಯಲ್ಲಿ ಜ್ಯೂಸ್,ಆಮ್ಲೇಟ್ ತಿಂದು ಹಣ ಪಾವತಿಸಲು ನಿರಾಕರಣೆ: ಎಸ್ಐ ಸೇರಿ, ಮೂವರು ಅಮಾನತು
Team Udayavani, Jun 7, 2023, 4:45 PM IST

ಚೆನ್ನೈ: ಅಂಗಡಿಯೊಂದರಲ್ಲಿ ಹೊಟ್ಟೆ ತುಂಬಾ ತಿಂದು ಹಣ ಪಾವತಿಸಲು ನಿರಾಕರಿಸಿದ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಕಾನ್ಟೇಬಲ್ ಗಳನ್ನು ಅಮಾನತುಗೊಳಿಸಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಇತ್ತೀಚೆಗೆ ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮೂವರು ಕಾನ್ಸ್ಟೇಬಲ್ ಗಳೊಂದಿಗೆ ಠಾಣೆಯ ಬಳಿ ಇರುವ ರಸ್ತೆ ಬದಿಯ ಅಂಗಡಿಯೊಂದಕ್ಕೆ ತೆರಳಿದ್ದಾರೆ. ಅಲ್ಲಿ ಜ್ಯೂಸ್ ಹಾಗೂ ಬ್ರೆಡ್ ಆಮ್ಲೇಟ್ ಆರ್ಡರ್ ಮಾಡಿ, ನೀರಿನ ಬಾಟಲಿಯನ್ನು ತೆಗೆದುಕೊಂಡಿದ್ದಾರೆ. ಕೆಲ ನಿಮಿಷದ ಬಳಿಕ ಹೇಳಿದ ತಿಂಡಿ ಬಂದಿದ್ದು, ಅದನ್ನು ತಿಂದ ಬಳಿಕ ಅಂಗಡಿಯವನು ಪೊಲೀಸರ ಬಳಿ ಹಣ ಪಾವತಿಸಲು ಕೇಳಿದ್ದಾರೆ.
ನಿಯತ್ತಿನಿಂದ ಹಣ ಪಾವತಿಸಲು ಕೇಳಿದ ಅಂಗಡಿ ಆತನಿಗೆ ಪೊಲೀಸರು ಅಂಗಡಿ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ಜೋರು ಮಾಡಿದ್ದಾರೆ. ಈ ಬಗ್ಗೆ ಅಂಗಡಿ ಮಾಲೀಕ ಮಣಿಮಂಗಲಂ ದೂರು ನೀಡಿದ್ದು, ಸಿಸಿಟಿವಿ ದೃಶ್ಯವನ್ನು ಆಧರಿಸಿ ತನಿಖೆ ನಡೆಸಲಾಗಿದೆ. ಪೊಲೀಸರ ತಪ್ಪು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಾಂಬರಂ ಕಮಿಷನರ್ ಅಮಲರಾಜ್ ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಇನ್ನು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು
MUST WATCH
ಹೊಸ ಸೇರ್ಪಡೆ

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್

Cauvery Water; ಕಾಂಗ್ರೆಸ್ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

September 29 ರಂದು ಕರ್ನಾಟಕ ಬಂದ್ ; ನೂರಾರು ಸಂಘಟನೆಗಳ ಬೆಂಬಲ

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ