Chennai: ರೈಲು ಹರಿದು ಹುಬ್ಬಳ್ಳಿಯ ಮೂವರು ಮಕ್ಕಳು ಮೃತ್ಯು
Team Udayavani, Oct 24, 2023, 8:15 PM IST
ಚೆನ್ನೈ: ನಗರದ ಹೊರವಲಯದ ಉರಪಕ್ಕಂ ಬಳಿ ಮಂಗಳವಾರ ಇಬ್ಬರು ಸಹೋದರರು ಸೇರಿದಂತೆ ಮೂವರು ಮಕ್ಕಳು ಉಪನಗರ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಹುಬ್ಬಳ್ಳಿ ಮೂಲದವರಾಗಿದ್ದು ಹಳಿಯಲ್ಲಿ ಆಟವಾಡುವ ವೇಳೆ ರೈಲಿಗೆ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಮಂಜುನಾಥ್(11) ರವಿ(12) ಮತ್ತು ಸುರೇಶ್(14) ಎನ್ನುವವರಾಗಿದ್ದಾರೆ.
ರವಿ ಮತ್ತು ಸುರೇಶ್ ಅವರು ಜಂಬಯ್ಯ ಎನ್ನುವವರ ಪುತ್ರರಾಗಿದ್ದು ಇಬ್ಬರು ಸಹೋದರರು ಕಿವುಡ ಮತ್ತು ಮೂಗರಾಗಿದ್ದರು. ಮಂಜುನಾಥ ಎಂಬಾತ ಹನುಮಂತ ಅವರ ಪುತ್ರನಾಗಿದ್ದು ಮಾತುಬರುತ್ತಿರಲಿಲ್ಲ. ಮೂವರು ಮಕ್ಕಳು ದಸರಾ ರಜೆಯಿದ್ದ ಕಾರಣ ಚೆನ್ನೈಗೆ ತೆರಳಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಅವರ ಪೋಷಕರು ಚೆನ್ನೈನಲ್ಲಿ ದಿನಗೂಲಿ ನೌಕರರಾಗಿದ್ದರು. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು
Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್ ಶೆಟ್ಟರ್
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ
Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ