ತಮಿಳುನಾಡು: ದಲಿತ ಗ್ರಾ.ಪಂ. ಅಧ್ಯಕ್ಷರಿಗೆ ಕೂರಲೂ ಅವಕಾಶ ಇಲ್ಲ
ಅಸ್ಪೃಶ್ಯತೆ ಇನ್ನೂ ಪಾಲನೆ ; ಟಿಎನ್ಯುಇಎಫ್ ಸಮಗ್ರ ಅಧ್ಯಯನ
Team Udayavani, Aug 12, 2022, 7:20 AM IST
ಚೆನ್ನೈ: ತಮಿಳುನಾಡಿನ ಹಲವು ಪಂಚಾಯಿತಿಗಳಲ್ಲಿ ಅಧ್ಯಕ್ಷರಾಗಿರುವ ದಲಿತ ಸಮುದಾಯದವರಿಗೆ ಕೂರಲು ಕುರ್ಚಿಯನ್ನೇ ನೀಡಲಾಗುತ್ತಿಲ್ಲ. ಇಂಥ ಒಂದು ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ತಮಿಳುನಾಡು ಅಸ್ಪೃಶ್ಯತಾ ನಿವಾರಣಾ ಘಟಕ (ಟಿಎನ್ಯುಇಎಫ್) ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಿದೆ. ದ್ರಾವಿಡ ರಾಜ್ಯದ 386 ಪಂಚಾಯಿತಿಗಳ ಪೈಕಿ 22 ಪಂಚಾಯಿತಿಗಳಲ್ಲಿ ದಲಿತ ಸಮುದಾಯದಿಂದ ಆಯ್ಕೆ ಯಾಗಿರುವ ಅಧ್ಯಕ್ಷರಿಗೆ ಕೂರಲು ಕುರ್ಚಿಯನ್ನೇ ನೀಡಲಾಗುತ್ತಿಲ್ಲ ಎಂದು ಅಭಿಪ್ರಾಯಕ್ಕೆ ಬರಲಾಗಿದೆ.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರ್ಣಗೊಂಡರೂ ಈ ವ್ಯವಸ್ಥೆ ಮುಂದುವರಿದಿರುವುದು ಖಂಡ ನಾರ್ಹ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ. ಅಸ್ಪೃಶ್ಯತೆಯ ಮನೋಭಾವ ಎಷ್ಟರ ಮಟ್ಟಿಗೆ ವ್ಯವಸ್ಥೆಯಲ್ಲಿ ಬೇರೂರಿದೆ ಎಂದರೆ, ಅಧ್ಯಕ್ಷರಾ ದವರಿಗೆ ರಾಷ್ಟ್ರ ಧ್ವಜಾರೋಹಣ ಮಾಡಲು, ಕೆಲವು ಹಂತಗಳಲ್ಲಿ ಪಂಚಾಯಿತಿ ಕಚೇರಿ ಆವರಣಕ್ಕೆ ಆಗಮಿ ಸಲು ಅವಕಾಶ ನೀಡಲಾಗುತ್ತಿಲ್ಲ. ಕೆಲವು ಸ್ಥಳಗಳಲ್ಲಿ ಪಂಚಾಯಿತಿ ಕಚೇರಿಗೆ ಬಂದರೂ ದಾಖಲೆಗಳನ್ನು ಪರಿಶೀಲಿಸಲೂ ಅಧ್ಯಕ್ಷರಿಗೆ ಅನುಮತಿಯನ್ನೇ ಕೊಡಲಾಗುತ್ತಿಲ್ಲ ಎಂದು ಕಂಡುಕೊಳ್ಳಲಾಗಿದೆ.
ಆಘಾತಕಾರಿ: ಸಮೀಕ್ಷೆಯನ್ನು ಬಿಡುಗಡೆ ಮಾಡಿದ ಬಳಿಕ ಟಿಎನ್ಯುಇಎಫ್ನ ಸಾಮ್ಯುಯೆಲ್ ರಾಜ್ “ಸಮೀಕ್ಷೆಯಲ್ಲಿ ಕಂಡು ಬಂದಿರುವ ಮಾಹಿತಿ ನಿಜಕ್ಕೂ ಆಘಾತಕಾರಿಯಾಗಿದೆ. ಪರಿಯಾರ್ ಪ್ರತಿಪಾದಿಸಿದ ಸಮಾನತೆಯನ್ನು ಪಾಲಿಸುವ ರಾಜ್ಯದಲ್ಲಿಯೇ ಇಂಥ ಘಟನೆಗಳು ನಡೆಯುತ್ತಿವೆ ಎಂದಾದರೆ, ಅದು ಪ್ರಶ್ನಾರ್ಹ’ ಎಂದರು.
ರಾಜ್ಯ ಸರ್ಕಾರ ದಲಿತ ಸಮುದಾ ಯದ ವ್ಯಕ್ತಿಗಳಿಗೆ ಸಾಂವಿಧಾನಿಕವಾಗಿ ನೀಡಲಾಗಿರುವ ಅಧಿಕಾರವನ್ನು ನಿಭಾ ಯಿಸಲು ಅವಕಾಶ ನೀಡದೇ ಇರುವ ಬಗ್ಗೆ ಪ್ರತ್ಯೇಕ ವ್ಯವಸ್ಥೆಯನ್ನೇ ರೂಪಿಸ ಬೇಕು ಎಂದು ಒತ್ತಾಯಿಸಿದರು.
ಅಧಿಕಾರಿಗಳ ನೇಮಿಸಿ: ತಮಿಳುನಾಡು ಸರ್ಕಾರಕ್ಕೆ ಈ ವರದಿ ನೀಡಲಾಗುತ್ತದೆ ಎಂದು ಹೇಳಿದ ಸಾಮ್ಯುಯೆಲ್ ರಾಜ್, ಆ.15ರಂದು ರಾಷ್ಟ್ರ ಧ್ವಜಾರೋಹಣ ನಡೆಸಲು ಅವಕಾಶ ನೀಡಬೇಕು. ಅದಕ್ಕಾಗಿ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕೆಲವು ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳೇ ದಲಿತ ಸಮುದಾಯದ ಅಧ್ಯಕ್ಷರು ರಾಷ್ಟ್ರ ಧ್ವಜಾರೋಹಣ ನಡೆಸದಂತೆ ಮನವೊಲಿಸುವ ಕೆಲಸ ನಡೆಸುತ್ತಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಡಿಎಂಕೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ