ಪ್ರಧಾನಿ ಮೋದಿ, ಅಮಿತ್ ಶಾ ಹತ್ಯೆಗೆ ಕರೆ: ತಮಿಳು ಬರಹಗಾರ, ವಾಗ್ಮಿ ಕಣ್ಣನ್ ಬಂಧನ
Team Udayavani, Jan 2, 2020, 7:54 AM IST
ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳು ಬರಹಗಾರ, ವಾಗ್ಮಿ ನೆಲ್ಲೈ ಕಣ್ಣನ್ ಅವರನ್ನು ಪೆರಂಬಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಡಿಸೆಂಬರ್ 29 ರಂದು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತ ಕಣ್ಣನ್, ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿದ್ದರು. ಅಮಿತ್ ಷಾ ಅವರು ಪ್ರಧಾನಿ ಮೋದಿಯವರ ಮಿದುಳು ಇದ್ದಂತೆ. ಅಮಿತ್ ಷಾ ಕರೆ ಮುಗಿದರೆ ಮೋದಿಯವರ ಕತೆ ಮುಗಿದಂತೆ. ಅಷ್ಟಾದರೂ ಕೂಡ ಯಾವ ಮುಸ್ಲಿಮರೂ ಇನ್ನು ಅವರಿಬ್ಬರನ್ನು ಹತ್ಯೆ ಮಾಡಲು ಮುಂದಾಗುತ್ತಿಲ್ಲ. ಇದು ನನಗೆ ಅಚ್ಚರಿ ತಂದಿದೆ ಎಂದು ಹೇಳುವ ವಿವಾದ ಸೃಷ್ಟಿಸಿದ್ದರು.
ನೆಲ್ಲೈ ಕಣ್ಣನ್ ಅವರ ಮಾತುಗಳು ಹಿಂಸೆಯನ್ನು ಪ್ರಚೋದಿಸುವಂತಿದೆ ಎಂದು ಪ್ರತಿಪಾದಿಸಿ ಒಟ್ಟು 15 ದೂರುಗಳು ದಾಖಲಾಗಿದ್ದವು. ಪೊಲೀಸರು ಪ್ರತ್ಯೇಕ ಎಫ್ ಐ ಆರ್ ಕೂಡ ದಾಖಲಿಸಿದ್ದರು. ಬಿಜೆಪಿ ಹಿರಿಯ ನಾಯಕರಾದ ಪಾನ್ ರಾಧಾಕೃಷ್ಣನ್, ಸಿ.ಪಿ.ರಾಧಾಕೃಷ್ಣನ್, ಎಲ್. ಗಣೇಶನ್ ಹಾಗೂ ಎಚ್. ರಾಜಾ ಅವರು ಮರೀನಾ ಬೀಚ್ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಕುಳಿತು ಪ್ರತಿಭಟನೆ ಮಾಡುವ ಮೂಲಕ ನೆಲ್ಲೈ ಕಣ್ಣನ್ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ