ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಆಸ್ತಿ ಹರಾಜಿಗೆ ಕೋರ್ಟ್ ಅಸ್ತು
Team Udayavani, Jan 26, 2023, 5:57 PM IST
ತಮಿಳುನಾಡು: ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರಿಗೆ ಸಂಬಂಧಿಸಿದ ಕೆಲ ಆಸ್ತಿಗಳನ್ನು ಹರಾಜು ಹಾಕಲು ಕೋರ್ಟ್ ಅನುಮತಿ ನೀಡಿದೆ.
ಈ ಹಿಂದೆ ಅಕ್ರಮ ಆಸ್ತಿ ಗಳಿಸಿದ್ದಾರೆಂಬ ದೂರಿನ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಜಯಲಲಿತಾ ಅವರ ಮನೆಯಲ್ಲಿ ದಾಖಲೆಗಳಿಲ್ಲದ ಚಿನ್ನಾಭರಣ, ವಾಚ್ ಹಾಗೂ ಸೀರೆಗಳು ಪತ್ತೆಯಾಗಿತ್ತು ಇದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆದರೆ ಜಯಲಲಿತಾ ಅವರು ನಿಧನರಾದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಶದಲ್ಲಿರುವ ಆಸ್ತಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆ ಆರ್ ಟಿಐ ಕಾರ್ಯಕರ್ತ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ವಶಪಡಿಸಿಕೊಂಡ ವಸ್ತುಗಳನ್ನು ಮಾರಾಟ ಮಾಡಲು ಸೂಕ್ತವಾದ ಅಧಿಕಾರಿಯನ್ನು ನೇಮಿಸುವಂತೆ ಜೊತೆಗೆ ಬಂದ ಹಣದಲ್ಲಿ ಕರ್ನಾಟಕ ಸರ್ಕಾರ ಖರ್ಚು ಮಾಡಿದ್ದ 5 ಕೋಟಿಯನ್ನು ತನ್ನಲ್ಲೇ ಇಟ್ಟುಕೊಂಡು ಉಳಿದ ಬಾಕಿ ಹಣವನ್ನು ತಮಿಳುನಾಡಿನ ಸರ್ಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ.
ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಕಿಡಿಗೇಡಿಗಳಿಂದ ಹಿಂದೂ ದೇಗುಲ ಧ್ವಂಸ; ಭಾರತದಿಂದ ಖಂಡನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ