ಸಿಜೆಐ ಆಗುವ ಕನಸು ಹೊತ್ತ ತನಿಷ್ಕಾಗೆ ಬೆನ್ನು ತಟ್ಟಿದ ಪ್ರಧಾನಿ ಮೋದಿ
Team Udayavani, Apr 12, 2023, 8:00 AM IST
ಇಂದೋರ್: ತನ್ನ 15ನೇ ವಯಸ್ಸಿನಲ್ಲೇ ಬಿಎ ಅಂತಿಮ ವರ್ಷದ ಪರೀಕ್ಷೆ ಬರೆ ಯುತ್ತಿರುವ ಮಧ್ಯಪ್ರದೇಶದ ಇಂದೋರ್ನ ತನಿಷ್ಕಾ ಸುಜಿತ್ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಆಗುವ ಕನಸು.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ತನಿಷ್ಕಾ, ತನ್ನ ಆಕಾಂಕ್ಷೆ ಬಗ್ಗೆ ತಿಳಿಸಿದ್ದಾರೆ. ಬಿಎ ಪದವಿ ಪೂರ್ಣಗೊಳಿಸಿದ ಬಳಿಕ ಅಮೆರಿಕದಲ್ಲಿ ಕಾನೂನು ಪದವಿ ಪಡೆಯಬೇಕೆಂದು, ಅನಂತರ ಮುಂದೊಂದು ದಿನ ಸುಪ್ರೀಂ ಕೋರ್ಟ್ ಸಿಜೆಐ ಆಗಬೇಕೆಂದು ತನ್ನ ಮನದ ಇಂಗಿತವನ್ನು ತಿಳಿಸಿದ್ದಾರೆ.
ಇದನ್ನು ಕೇಳಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ಪ್ರಧಾನಿ ಮೋದಿ, “ಸುಪ್ರೀಂ ಕೋರ್ಟ್ಗೆ ಹೋಗಿ ನ್ಯಾಯವಾದಿಗಳ ವಾದವನ್ನು ಆಲಿಸು. ಇದರಿಂದ ನಿನ್ನ ಗುರಿ ಮುಟ್ಟಲು ಪ್ರೇರಣೆ ದೊರೆಯಲಿದೆ’ ಎಂದು ಸಲಹೆ ನೀಡಿದ್ದಾರೆ.
10ನೇ ತರಗತಿ ಪೂರ್ಣಗೊಳಿಸಿದ ತನಿಷ್ಕಾ, 13ನೇ ವಯಸ್ಸಿನಲ್ಲೇ ಇಂದೋರ್ನ ದೇವಿ ಅಹಿಲ್ಯಾ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಪಾಸ್ ಆಗಿದ್ದು, ವಿಶೇಷ ಪ್ರಕರಣದಲ್ಲಿ ಆಕೆಗೆ ಬಿಎ(ಮನೋವಿಜ್ಞಾನ) ಪದವಿಗೆ ಪ್ರವೇಶ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ