ರಟ್ಟಿನ ಪೆಟ್ಟಿಗೆಯಲ್ಲಿ ಯೋಧರ ಮೃತದೇಹ, ನೆಟ್ಟಿಗರ ಆಕ್ರೋಶ
Team Udayavani, Oct 9, 2017, 1:05 PM IST
ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಹೆಲಿಕಾಪ್ಟರ್ ಪತನಗೊಂಡು ಸಾವಿಗೀಡಾದ ಭಾರತೀಯ ವಾಯುಪಡೆ ಮತ್ತು ಸೇನಾಪಡೆಯ ಏಳು ಯೋಧರ ಮೃತದೇಹವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ, ರಟ್ಟಿನ ಪೆಟ್ಟಿಯೊಳಗೆ ಇಟ್ಟು ತೆಗೆದುಕೊಂಡು ಬಂದಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.
ಏಳು ಮಂದಿ ಯುವಕರ(ಯೋಧರ) ಮೃತದೇಹವನ್ನು ತಾಯ್ನಾಡಿಗೆ ತರಲಾಗಿದೆ ಎಂಬುದಾಗಿ ಲೆಫ್ಟಿನೆಂಟ್ ಜನರಲ್ ಎಚ್.ಎಸ್.ಪನಾಗ್ ಅವರು ಯೋಧರ ಮೃತದೇಹವನ್ನು ರಟ್ಟಿನ ಪೆಟ್ಟಿಗೆಯಲ್ಲಿರಿಸಿರುವ ಫೋಟೋವನ್ನು ಭಾನುವಾರ ಟ್ವಿಟರ್ನಲ್ಲಿ ಶೇರ್ ಮಾಡಿದ್ದರು. ಬಳಿಕ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಇದೊಂದು ಆಘಾತಕಾರಿ ಬೆಳವಣಿಗೆ, ನಮ್ಮ ದೇಶದ ವೀರ ಯೋಧರನ್ನು ಗೌರವಿಸೋ ರೀತಿ ಇದೇನಾ? ಎಂಬುದಾಗಿ ಟ್ವೀಟ್ ಮಾಡಿ ತಿರುಗೇಟು ನೀಡಿದ್ದರು. ತದನಂತರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧ, ಟೀಕೆಗಳು ವ್ಯಕ್ತವಾಗಿದ್ದವು.
ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಈ ಬಗ್ಗೆ ಉತ್ತರಿಸಿದ ಭಾರತೀಯ ಸೇನಾಪಡೆ ಮೃತ ಯೋಧರಿಗೆ ಸೇನಾ ಗೌರವವನ್ನು ಸಲ್ಲಿಸಲಾಗಿದೆ. ಸಮುದ್ರ ಮಟ್ಟದಿಂದ 17000 ಎತ್ತರದಲ್ಲಿ ಅಷ್ಟೊಂದು ಶವಪೆಟ್ಟಿಗೆಗಳನ್ನು ಹೊತ್ತುಕೊಂಡು ಹಾರಲು ಹೆಲಿಕಾಪ್ಟರ್ಗೆ ಸಾಧ್ಯವಿಲ್ಲ. ಹಾಗಾಗಿ ರಟ್ಟಿನ ಪೆಟ್ಟಿಗೆ ಬಳಸಲಾಗಿದೆ ಎಂದು ಹೇಳಿದೆ.
ಅಲ್ಲಿನ ಸ್ಥಳೀಯರು ತಮ್ಮ ವಾಡಿಕೆಯಂತೆ ಯೋಧರ ಮೃತದೇಹವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿದ್ದರು. ಆದರೆ ನಾವು ನಮ್ಮ ಯೋಧರಿಗೆ ನೀಡಬೇಕಾದ ಎಲ್ಲಾ ಗೌರವಗಳನ್ನು ನೀಡುತ್ತೇವೆ ಎಂದು ಸೇನಾ ಅಧಿಕಾರಿಗಳು ಸಮಜಾಯಿಷಿಯನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ