ಕಲ್ಕಿ ಭಗವಾನ್‌ಗೂ ತೆರಿಗೆ ಅಧಿಕಾರಿಗಳ ಕಾಟ

ಕೋಟಿಗಟ್ಟಲೆ ಆಸ್ತಿಗೆ ಲೆಕ್ಕವಿಲ್ಲ?

Team Udayavani, Oct 22, 2019, 7:25 PM IST

kalki-bagavan

ಚೆನ್ನೈ: ತೆರಿಗೆ ಅಧಿಕಾರಿಗಳ ಕಾಟ ಈಗ ದೊಡ್ಡ ದೊಡ್ಡ ಕುಳಗಳಿಗೆ ಮಾತ್ರವಲ್ಲ “ಭಗವಾನ್‌’ಗೂ ಆರಂಭವಾಗಿದೆ. ಅದೂ ಕಲ್ಕಿ ಭಗವಾನ್‌ಗೆ!
ಸ್ವಯಂ ಘೋಷಿತ ದೇವಮಾನವ ಕಲ್ಕಿ ಭಗವಾನ್‌ ಬಳಿ ಲೆಕ್ಕವಿಲ್ಲದ ಆಸ್ತಿ ಪತ್ತೆಯಾಗುವುದರೊಂದಿಗೆ ತೆರಿಗೆ ಸಮಸ್ಯೆ ಶುರುವಾಗಿದೆ.

ಕಳೆದ ವಾರ ಕಲ್ಕಿ ಭಗವಾನ್‌ ನಿವಾಸದ ಮೇಲೆ ತೆರಿಗೆ ಅಧಿಕಾರಿಗಳ ದಾಳಿಯಾಗಿದೆ. ಈ ವೇಳೆ 45 ಕೋಟಿ ರೂ. ನಗದು, 88 ಕೆ.ಜಿ. ಚಿನ್ನ, 1271 ಕ್ಯಾರೆಟ್‌ ವಜ್ರ, ಸುಮಾರು 600 ಕೋಟಿ ರೂ.ಗಳ ನಗದು ರಸೀದಿ ಪತ್ತೆಯಾಗಿದ್ದು, ಆ ಆಸ್ತಿಗಳನ್ನು ಘೋಷಿಸಿರಲಿಲ್ಲ ಎಂದು ಹೇಳಲಾಗಿದೆ.

ಇದರೊಂದಿಗೆ ದೇಶದ ವಿವಿಧ ಕಂಪೆನಿಗಳಲ್ಲಿ, ವಿದೇಶಗಳಲ್ಲಿ ಹೂಡಿಕೆ ಮಾಡಿದ ವಿಚಾರವನ್ನೂ ಘೋಷಿಸಿರಲಿಲ್ಲ. 5 ದಿನಗಳಲ್ಲಿ ಬೆಂಗಳೂರು, ಹೈದರಾಬಾದ್‌, ಚೆನ್ನೈ ಸೇರಿದಂತೆ 40ಕ್ಕೂ ಹೆಚ್ಚು ಕಲ್ಕಿ ಭಗವಾನ್‌ ವಿವಿಧ ಆಶ್ರಮಕ್ಕೆ ದಾಳಿ ನಡೆಸಲಾಗಿದ್ದು ತೆರಿಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ಈ ಬಗ್ಗೆ ವೀಡಿಯೋ ಪ್ರತಿಕ್ರಿಯೆಯನ್ನು ಕಲ್ಕಿ ಭಗವಾನ್‌ ನೀಡಿದ್ದು, “ನಾವು ಭಕ್ತರನ್ನು ಬಿಟ್ಟು ಹೋಗುವುದಿಲ್ಲ. ನಾವೆಲ್ಲೂ ಅಡಗಿಲ್ಲ. ನಾವು ನೆಹಮನ್‌ ಆಶ್ರಮದಲ್ಲೇ ಇದ್ದೇವೆ. ನಿಮ್ಮ ಸಹಾಯಕ್ಕಾಗಿ ನಾವು ತರಗತಿಗಳನ್ನು ನಡೆಸುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಏತನ್ಮಧ್ಯೆ ತೆರಿಗೆ ಅಧಿಕಾರಿಗಳು ಕಲ್ಕಿ ಭಗವಾನ್‌ ಪುತ್ರ ಕೃಷ್ಣನಿಗೆ ನೋಟಿಸ್‌ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಮೂಲಗಳ ಪ್ರಕಾರ ಆತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಹವಣಿಸಿದ್ದಾಗಿ ಹೇಳಲಾಗಿದೆ.

ಇದರೊಂದಿಗೆ ಕಲ್ಕಿ ಭಗವಾನ್‌ ಅವರ ಅಮ್ಮಾ ಶ್ರೀ ಭಗವಾನ್‌ ಫೌಂಡೇಶನ್‌ ತೆರಿಗೆ ಅಧಿಕಾರಿಗಳ ದಾಳಿ ಕುರಿತು ಸುದ್ದಿಗಳನ್ನು ತಳ್ಳಿ ಹಾಕಿದೆ. ಈ ಬಗ್ಗೆ ಹೇಳಿಕೆ ನೀಡಿದ್ದು, “ಸರಕಾರ ಯಾವುದೇ ಅಭಿವೃದ್ಧಿಯಾಗುತ್ತಿರುವ ಸಂಘಟನೆಯ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಬಹುದು. ನಾವು ದೇಶದ ಕಾನೂನಿಗೆ ಗೌರವ ನೀಡುತ್ತೇವೆ. ನಾವು ಇದನ್ನು ಕಾನೂನು ಪ್ರಕಾರವೇ ಎದುರಿಸುತ್ತೇವೆ. ನಾವು ಕಾನೂನು ಪ್ರಕಾರ ನಡೆದುಕೊಳ್ಳದಿದ್ದರೆ, ಆ ಕುರಿತ ಸರಕಾರದ ತೀರ್ಮಾನ ಎದುರಿಸಲು ಸಿದ್ಧರಿದ್ದೇವೆ’ ಎಂದು ಹೇಳಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.