ತೀರ್ಪು ಜಾರಿ ಬಗ್ಗೆ ಟಿಡಿಬಿ ಯು ಟರ್ನ್


Team Udayavani, Feb 7, 2019, 12:30 AM IST

21.jpg

ಹೊಸದಿಲ್ಲಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 10-50 ವಯೋಮಿತಿಯ ಮಹಿಳೆಯರು ಪ್ರವೇಶಿಸಬಹುದು ಎಂದು 2018ರ
ಸೆ. 28ರಂದು ನೀಡಿದ ತೀರ್ಪು ಬದಲು ಮಾಡಬಾರದು ಎಂದು ಕೇರಳ ಸರಕಾರ, ತಿರುವಾಂಕೂರು ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್‌ಗೆ ಅರಿಕೆ ಮಾಡಿವೆ. 

ಈ ಬಗ್ಗೆ ಸಲ್ಲಿಕೆಯಾಗಿರುವ 65 ಮೇಲ್ಮನವಿ ಅರ್ಜಿಗಳನ್ನು ಪರಿಶೀಲಿಸಿದ ಮುಖ್ಯ ನ್ಯಾಯ ಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ಸಾಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿದೆ. ಬುಧವಾರದ ವಿಚಾರಣೆಯಲ್ಲಿನ ಮಹತ್ವದ ಅಂಶವೆಂದರೆ ಅಯ್ಯಪ್ಪ ದೇಗುಲದ ಆಡಳಿತದ ಹೊಣೆ ಹೊತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡುವ ತೀರ್ಪು ಜಾರಿಗೆ ಬೆಂಬಲ ನೀಡುವುದಾಗಿ ಬದಲಾಗಿರುವ ನಿಲುವನ್ನು ಪ್ರಕಟಿಸಿದೆ. ಮಂಡಳಿ ಪರ ವಾದಿಸಿದ ರಾಕೇಶ್‌ ದ್ವಿವೇದಿ ಈ ನಿಲುವು ತಿಳಿಸಿದ್ದಾರೆ. ಸಂವಿಧಾನದ 25 (1)ರ ಪ್ರಕಾರ ಸಮಾನ ಹಕ್ಕಿನ ರೂಪದಲ್ಲಿ ಧರ್ಮವನ್ನು ಪಾಲನೆ ಮಾಡುವ ಅವಕಾಶ ನೀಡುತ್ತದೆ ಎಂದು ದ್ವಿವೇದಿ ಹೇಳಿದ್ದಾರೆ. ಹೀಗಾಗಿ ನಿಲುವಿನಲ್ಲಿ ಬದಲಾವಣೆ ಎಂದಿದ್ದಾರೆ. ಅವರ ಜತೆಗೆ, ಮಹಿಳೆಯರ ಪ್ರವೇಶದ ಬಗ್ಗೆ ಹಲವು ನಿಲುವುಗಳನ್ನು ಪ್ರಕಟಿಸಿದ  ಕೇರಳ ಸರಕಾರ ಕೂಡ ತೀರ್ಪಿನಲ್ಲಿ ಬದಲಾವಣೆ ಬೇಡ ಎಂದು ವಾದಿಸಿತು. ನಾಯರ್‌ ಸರ್ವಿಸ್‌ ಸೊಸೈಟಿ ಪರವಾಗಿ ನ್ಯಾಯ ವಾದಿ ಕೆ. ಪರಾಶರನ್‌ ವಾದ ಮಂಡಿಸಿದರು. 

ಮತ್ತೂಮ್ಮೆ ಪ್ರವೇಶಿಸುವೆವು: ಈಗಾಗಲೇ ದೇಗುಲ ಪ್ರವೇಶ ಮಾಡಿದ ಬಿಂದು ಮತ್ತು ಕನಕದುರ್ಗಾ ಮತ್ತೂಮ್ಮೆ ದೇಗುಲವನ್ನು ಪ್ರವೇಶಿಸಿ ಅಯ್ಯಪ್ಪ ದೇವರ ದರ್ಶನ ಮಾಡುವ ಇರಾದೆಯನ್ನು ನ್ಯಾಯಪೀಠದ ಮುಂದೆ ವ್ಯಕ್ತಪಡಿಸಿದ್ದಾರೆ. ಫೆ.12ರಂದು ದೇಗುಲ ಮತ್ತೂಮ್ಮೆ ತೆರೆಯಲಿರುವುದರಿಂದ ಅವರ ಹೇಳಿಕೆ ಮಹತ್ವ ಪಡೆದಿದೆ. ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್‌ ಮಹಿಳೆಯರ ಪರ ವಾದಿಸಿದರು. “ಪ್ರಾರ್ಥನೆ ಸಲ್ಲಿಸುವುದು ನನ್ನ ಕಕ್ಷಿದಾರರ ಸಾಂವಿಧಾನಿಕ ಹಕ್ಕು. ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ’ ಎಂದು ವಾದಿಸಿದರು. ಅವರಿಬ್ಬರು ಮುಖ್ಯ ತಂತ್ರಿ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಿದ್ದಾರೆ.

ತೀರ್ಪಿನ ಬಗ್ಗೆ ಬೆಂಬಲ ಕೊಟ್ಟದ್ದು ಎಲ್‌ಡಿಎಫ್ ಸರಕಾರದ ಒತ್ತಡದಿಂದ ಅಲ್ಲ. ಮಂಡಳಿ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಿರಲಿಲ್ಲ.
ಎ.ಪದ್ಮಕುಮಾರ್‌, ಟಿಡಿಬಿ ಅಧ್ಯಕ್ಷ

ಸುಪ್ರೀಂಕೋರ್ಟಲ್ಲಿ 65 ಅರ್ಜಿಗಳ ವಿಚಾರಣೆ
ತೀರ್ಪು ಕಾಯ್ದಿರಿಸಿದ ಸಿಜೆಐ ನೇತೃತ್ವದ ಪೀಠ

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.