ಟಿಡಿಪಿ ಸಚಿವರ ಪದತ್ಯಾಗ


Team Udayavani, Mar 9, 2018, 8:15 AM IST

s-39.jpg

ನವ ದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರ ಸಂಬಂಧ ಬಿಜೆಪಿ ಮತ್ತು ಟಿಡಿಪಿ ನಡುವಿನ ಮುನಿಸು ಗುರುವಾರವೂ ಮುಂದುವರಿದಿದ್ದು, ಕೇಂದ್ರ ಸಂಪುಟದಿಂದ ಚಂದ್ರ ಬಾಬು ನಾಯ್ಡು ಅವರ ಪಿಡಿಪಿಯ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ಸ್ವತಃ ಪ್ರಧಾನಿ ಮೋದಿ ಅವರೇ ನಾಯ್ಡು ಜತೆ 10 ನಿಮಿಷಗಳ ಕಾಲ ದೂರವಾಣಿ ಮಾತುಕತೆ ನಡೆಸಿದರೂ ಫ‌ಲಪ್ರದವಾಗಿಲ್ಲ. 

ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಪ್ರಧಾನಿ ಭೇಟಿ ಮಾಡಿದ ನಾಗರಿಕ ವಿಮಾನಯಾನ ಸಚಿವ ಅಶೋಕ್‌ ಗಣಪತಿ ರಾಜು ಹಾಗೂ ವಿಜ್ಞಾನ ಮತ್ತು ತಂತ್ರ ಜ್ಞಾನ ಇಲಾಖೆ ಸಹಾಯಕ ಸಚಿವ ವೈ.ಎ ಸ್‌. ಚೌಧರಿ ರಾಜೀನಾಮೆ ಸಲ್ಲಿಸಿದ್ದಾರೆ. ಆಂಧ್ರದ ಜನರ ಆಶೋತ್ತರಗಳಿಗೆ ಅನುಗುಣವಾಗಿ ಈ ರಾಜೀನಾಮೆ ಸಲ್ಲಿಸಲಾಗಿದೆ ಎಂದು ಪ್ರಧಾನಿ ಮೋದಿ ಅವರಿಗೆ ಹೇಳಿಯೇ ತ್ಯಾಗ ಪತ್ರ ನೀಡಿ ಬಂದಿದ್ದಾರೆ. 

ನಂತರ ಮಾತನಾಡಿದ ವೈ.ಎ ಸ್‌. ಚೌಧರಿ, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಕಾರಣದಿಂದಾಗಿ ಅನಿವಾರ್ಯವಾಗಿ ಸಂಪುಟದಿಂದ ಹೊರಗೆ ಬರಬೇಕಾಯಿತು ಎಂದರು. ಈ ಬೆಳವಣಿಗೆಯನ್ನು ವಿವಾಹ ಮತ್ತು ವಿಚ್ಛೇದನಕ್ಕೆ ಹೋಲಿಕೆ ಮಾಡಿದ ಅವರು, ಎಲ್ಲರಿಗೂ ವಿವಾಹ ಖುಷಿ ತರುತ್ತದೆ, ಆದರೆ, ವಿಚ್ಛೇದನವನ್ನು ಯಾರೂ ಸಂತಸದಿಂದ ಆಲಿಂಗನ ಮಾಡಿಕೊಳ್ಳಲ್ಲ. ದುರದೃಷ್ಟವಶಾತ್‌, ಇಂದು ವಿಚ್ಛೇದನಕ್ಕೆ ಶರಣಾಗುವ ಕಾಲ ಬಂದಿದೆ ಎಂದರು. ಜತೆಗೆ ಸಹಕಾರದ ಮಾತುಗಳನ್ನಾಡುತ್ತಿರುವ ಕಾಂಗ್ರೆಸ್‌ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿರುವ ಟಿಡಿಪಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಭರವಸೆಯನ್ನೂ ನೆನಪಿಸಿದ್ದಾರೆ. 

ಸದ್ಯ ಟಿಡಿಪಿ ಲೋಕ ಸಭೆಯಲ್ಲಿ 16 ಮತ್ತು ರಾಜ್ಯ ಸಭೆಯಲ್ಲಿ ಆರು ಸದಸ್ಯರನ್ನು ಒಳಗೊಂಡಿದ್ದು, ಎನ್‌ಡಿಎಗೆ ನೀಡಿರುವ ಬೆಂಬಲ ಮುಂದುವರಿಸಿಕೊಂಡು ಹೋಗಲಿದ್ದೇವೆ ಎಂದು ಟಿಡಿಪಿ ನಾಯಕರು ಹೇಳಿದ್ದಾರೆ. 

ನಾಯ್ಡು ಜತೆ ಮೋದಿ 10 ನಿಮಿಷ ಚರ್ಚೆ
ಈ ಬೆಳವಣಿಗೆಗಳ ಮಧ್ಯೆಯೇ ಪ್ರಧಾನಿ ಮೋದಿ ಅವರು ಚಂದ್ರ ಬಾಬು ನಾಯ್ಡು ಅವರಿಗೆ ದೂರವಾಣಿ ಕರೆ ಮಾಡಿ 10 ನಿಮಿಷ ಗಳ ಕಾಲ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮನವೊಲಿಕೆಯನ್ನೂ ನಡೆಸಿದ್ದಾರೆ. ಆದರೆ, ಮೋದಿ ಅವರು ಆಂಧ್ರಕ್ಕೆ ವಿಶೇಷ ಸ್ಥಾನ ಮಾನ ನೀಡುವ ಬಗ್ಗೆ ಭರವಸೆ ನೀಡಿಲ್ಲ. ಹೀಗಾಗಿ ಮಾತುಕತೆ ಮುರಿದು ಬಿದ್ದಿದೆ. 

ಬಿಜೆಪಿ ಸಚಿವರ ರಾಜೀನಾಮೆ
ಇನ್ನು ದೋಸ್ತಿ ಕಾಳಗದ ನಡುವೆಯೇ ಆಂಧ್ರ ಸಂಪುಟದಲ್ಲಿದ್ದ ಬಿಜೆಪಿಯ ಇಬ್ಬರು ಸಚಿವರು ಗುರುವಾರ ಬೆಳಗ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸೂಚನೆ ಅನ್ವಯ ರಾಜೀನಾಮೆ ನೀಡಿದ್ದಾರೆ.

ವೈಎಸ್‌ ಆರ್‌ ಕಾಂಗ್ರೆಸ್‌ ಮತ್ತು ಇತರೆ ಪಕ್ಷಗಳ ಒತ್ತಡ ಮತ್ತು ವಿಶೇಷ ಸ್ಥಾನ ಮಾನದ ಕುರಿತ ಅಪಪ್ರಚಾರದಿಂದಾಗಿ ಟಿಡಿ ಪಿಗೆ ಸೇರಿದ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ. 
ಅನಂತ್‌ ಕುಮಾರ್‌,  ಸಂಸದೀಯ ವ್ಯವಹಾರಗಳ ಸಚಿವ

ವಿಶೇಷ ಸ್ಥಾನ ಮಾನಕ್ಕೆ ಆಗ್ರಹಿಸಿ ನಾಯ್ಡು ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದಾರೆ. ನಿತೀಶ್‌ ಕುಮಾರ್‌ ಕೂಡ ಇಂಥದ್ದೇ ಕಠಿಣ ನಿರ್ಧಾರಕ್ಕೆ ಮುಂದಾಗಬೇಕು. ಬಿಹಾರಕ್ಕೆ ವಿಶೇಷ ಸ್ಥಾನ ಮಾನಕ್ಕೆ ಒತ್ತಾಯಿಸಬೇಕು.
ಮನೋಜ್‌ ಝಾ, ಆರ್‌ ಜೆಡಿ ವಕ್ತಾರ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.