ಕುರಾನ್ ಓದಲಿ,ಆದರೆ ಮದರಸಾಗಳ ಶಿಕ್ಷಣ ಅಸ್ತಿತ್ವದಲ್ಲಿರಬಾರದು: ಹಿಮಂತ ಬಿಸ್ವಾ
ಭಾರತದಲ್ಲಿರುವವರೆಲ್ಲರೂ ಮೂಲ ಹಿಂದೂಗಳೇ...ಎಂದ ಅಸ್ಸಾಂ ಸಿಎಂ
Team Udayavani, May 23, 2022, 2:46 PM IST
ನವದೆಹಲಿ : ‘ಮದರಸಾ’ ಎಂಬ ಪದವು ಅಸ್ತಿತ್ವದಲ್ಲಿರಬಾರದು, ಎಲ್ಲರಿಗೂ ಶಾಲೆಗಳಲ್ಲಿ ಸಮಾನ ಶಿಕ್ಷಣ ನೀಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅಭಿಪ್ರಾಯಪಟ್ಟಿದ್ದಾರೆ.
ಪಾಂಚಜನ್ಯ ಸಾಪ್ತಾಹಿಕದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಹಿಮಂತ ಬಿಸ್ವಾ ಅವರು, ಶಿಕ್ಷಣಕ್ಕಿಂತ ಧಾರ್ಮಿಕ ಪ್ರಚೋದನೆಗೆ ಆದ್ಯತೆ ನೀಡುವ ಮದರಸಾಗಳ ಅಸ್ತಿತ್ವವನ್ನು ನಾನು ಯಾವಾಗಲೂ ಪ್ರಶ್ನಿಸುತ್ತೇನೆ. ಪ್ರತಿ ಮಗುವೂ ವಿಜ್ಞಾನ, ಗಣಿತ ಮತ್ತು ಆಧುನಿಕ ಶಿಕ್ಷಣದ ಇತರ ಶಾಖೆಗಳ ಜ್ಞಾನಕ್ಕೆ ತೆರೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಮದರಸಾಗಳಲ್ಲಿನ ವಿದ್ಯಾರ್ಥಿಗಳು ಅತ್ಯಂತ ಪ್ರತಿಭಾವಂತರಾಗಿದ್ದು, ಅವರು ಕುರಾನ್ನ ಪ್ರತಿಯೊಂದು ಪದವನ್ನು ಹೃದಯದಿಂದ ಕಂಠಪಾಠ ಮಾಡಿರುತ್ತಾರೆ ಎಂದು ಮಾಜಿ ಕುಲಪತಿ ಯೊಬ್ಬರ ಹೇಳಿಕೆಗೆ ತೀಕ್ಷ್ಣವಾದ ಪ್ರತ್ಯುತ್ತರ ನೀಡಿ ” ನಮ್ಮ ದೇಶದ ಎಲ್ಲಾ ಮುಸ್ಲಿಮರು ಹಿಂದೂಗಳು,ಭಾರತದಲ್ಲಿ ಯಾರೂ ಮುಸ್ಲಿಮರಾಗಿ ಹುಟ್ಟಿಲ್ಲ ಭಾರತದಲ್ಲಿ ಎಲ್ಲರೂ ಹಿಂದೂಗಳೇ ಆಗಿದ್ದರು. ಆದ್ದರಿಂದ, ಒಂದು ಮುಸ್ಲಿಂ ಮಗು ಅತ್ಯಂತ ಪ್ರತಿಭಾವಂತನಾಗಿದ್ದರೆ, ನಾನು ಅವನ ಹಿಂದೂ ಗತಕಾಲಕ್ಕೆ ಭಾಗಶಃ ಮನ್ನಣೆ ನೀಡುತ್ತೇನೆ ಎಂದರು.
ಮದ್ರಸಾ ಎಂಬ ಪದ ಇರುವವರೆಗೂ, ಮಕ್ಕಳು ವೈದ್ಯರು ಮತ್ತು ಎಂಜಿನಿಯರ್ ಆಗುವ ಬಗ್ಗೆ ಯೋಚಿಸಲು ಸಾಧ್ಯವಾಗುವುದಿಲ್ಲ. ಮದರಸಾಗಳಲ್ಲಿ ಓದಿದರೆ ಡಾಕ್ಟರ್, ಇಂಜಿನಿಯರ್ ಆಗುವುದಿಲ್ಲ ಎಂದು ಮಕ್ಕಳಿಗೆ ಹೇಳಿದರೆ ಅವರೇ ಹೋಗಲು ನಿರಾಕರಿಸುತ್ತಾರೆ ಎಂದರು.
ಇದನ್ನೂ ಓದಿ : ರೇವ್ ಪಾರ್ಟಿಗೆ ಪೊಲೀಸರ ದಾಳಿ; ಡ್ರಗ್ಸ್ ನಶೆ ಹೆಚ್ಚಾಗಿ ಕುಸಿದು ಬಿದ್ದ ಯುವಕ ಸಾವು
” ಮನೆಯಲ್ಲಿ ನಿಮ್ಮ ಮಕ್ಕಳಿಗೆ ಕುರಾನ್ ಕಲಿಸಿ, ಆದರೆ ಅವರ ಮಾನವ ಹಕ್ಕುಗಳನ್ನು ಉಲ್ಲಂಘಿಸಿ ಮಕ್ಕಳನ್ನು ಮದರಸಾಗಳಿಗೆ ಸೇರಿಸಬಾರದು ಎಂದು ಹೇಳಿದರು.
2020 ರಲ್ಲಿ, ಅಸ್ಸಾಂ ಎಲ್ಲಾ ಸರ್ಕಾರಿ ಮದರಸಾಗಳನ್ನು ವಿಸರ್ಜಿಸಲು ಮತ್ತು ‘ಜಾತ್ಯತೀತ ಶಿಕ್ಷಣ ವ್ಯವಸ್ಥೆಯನ್ನು ಸುಗಮಗೊಳಿಸುವ’ ಪ್ರಯತ್ನದಲ್ಲಿ ಸಾಮಾನ್ಯ ಶಿಕ್ಷಣ ಸಂಸ್ಥೆಗಳಾಗಿ ಪರಿವರ್ತಿಸಲು ನಿರ್ಧರಿಸಿತು. ಈ ವಿಚಾರ ಕೋರ್ಟ್ ನಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ