West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Team Udayavani, May 7, 2024, 11:07 PM IST
ನವದೆಹಲಿ: 25,000 ಶಿಕ್ಷಕರ ನೇಮಕಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಹರಿಹಾಯ್ದಿದೆ.
ಶಿಕ್ಷಕರ ನೇಮಕಾತಿ ಕುರಿತು ಸಿಬಿಐ ತನಿಖೆ ನಡೆಯುತ್ತಿರುವಾಗಲೂ ಹೆಚ್ಚು ಶಿಕ್ಷಕ ಹುದ್ದೆಗಳನ್ನು ಸೃಷ್ಟಿಸಿ, ವೇಟಿಂಗ್ಲಿಸ್ಟ್ನಲ್ಲಿದ್ದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿದ್ದು ಏಕೆ ಎಂದು ಪ್ರಶ್ನಿಸಿದೆ.
ನೇಮಕಾತಿಯನ್ನು ಮಕ್ಕಳು ಮತ್ತು ಶಿಕ್ಷಕರ ಅನುಪಾತದ ಅನುಗುಣವಾಗಿ ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಪರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರ ಪೀಠಕ್ಕೆ ತಿಳಿಸಿದರು. ಈ ವೇಳೆ, ಶಾಲಾ ಸೇವಾ ಆಯೋಗದ ಪರ ವಕೀಲರು, ಉದ್ಯೋಗಗಳನ್ನು ರದ್ದು ಮಾಡುವ ಅಧಿಕಾರ ವ್ಯಾಪ್ತಿಯು ಕಲ್ಕತ್ತಾ ಹೈಕೋರ್ಟ್ಗೆ ಇಲ್ಲ ಎಂದು ವಾದಿಸಿದರು.
ಆಗ ಪೀಠವು, ಉತ್ತರ ಪತ್ರಿಕೆಗಳ ಓಎಂಆರ್ ಶೀಟ್, ಸ್ಕ್ಯಾನ್ ಮಾಡಿದ ಪ್ರತಿಗಳು ನಾಶವಾಗಿವೆಯೇ ಎಂದು ಪ್ರಶ್ನಿಸಿತು. ಇದಕ್ಕೆ ವಕೀಲರು ಹೌದೆಂದರು. ಹಾಗಿದ್ದರೆ, ನೇಮಕಾತಿಗೆ ಸಂಬಂಧಿಸಿದ ಎಲ್ಲ ಡೇಟಾ ಇದೆಯೆಂದು ಆರ್ಟಿಐ ಅರ್ಜಿಗೆ ಉತ್ತರಿಸಿದ್ದು ಯಾಕೆ, ಹೀಗೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಜನರು ಕಳೆದುಕೊಳ್ಳುತ್ತಾರೆಂದು ತಿಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?