ಅಧಿಕೃತ ಯಾತ್ರೆಗೂ ಮುಂಚೆ ಅಮರನಾಥ ಗುಹಾಲಯಕ್ಕೆ ಭೇಟಿ ನೀಡಿದರೇ ಆ ಎಂಟು ಜನ?

ಅಚ್ಚರಿ ಮೂಡಿಸಿದೆ ಆ ಯಾತ್ರಿಕರ ತಂಡ ಪ್ರಕಟಿಸಿರುವ ನೈಸರ್ಗಿಕ ಹಿಮಲಿಂಗದ ಚಿತ್ರಗಳು!

Team Udayavani, Apr 29, 2019, 1:09 PM IST

Amarnath-726

ಯಾತ್ರಾರ್ಥಿಗಳ ತಂಡ ಹಂಚಿಕೊಂಡಿರುವ ಅಮರನಾಥ ಗುಹಾಲಯದಲ್ಲಿ ರೂಪುಗೊಂಡಿರುವ ನೈಸರ್ಗಿಕ ಶಿವಲಿಂಗದ ಚಿತ್ರ.

ನವದೆಹಲಿ: ಹಿಂದೂಗಳಿಗೆ ಪರಮ ಪವಿತ್ರವಾಗಿರುವ ಅಮರನಾಥ ಯಾತ್ರೆ ಪ್ರಾರಂಭವಾಗಲು ಇನ್ನೂ ಎರಡು ತಿಂಗಳು ಬಾಕಿಯಿದೆ. ಆದರೆ ಯಾತ್ರಾರ್ಥಿಗಳ ತಂಡವೊಂದು ತಾವು ಈಗಾಗಲೇ ಅಮರನಾಥ ಯಾತ್ರೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದಾಗಿ ಹೇಳಿಕೊಂಡಿದೆ. ಮಾತ್ರವಲ್ಲದೇ ತಾವು ಅಲ್ಲಿಗೆ ಭೇಟಿ ನೀಡಿರುವ ಸಂದರ್ಭದಲ್ಲಿ ತೆಗೆದಿರುವುದಾಗಿ ಹೇಳಿಕೊಂಡಿರುವ ನೈಸರ್ಗಿಕ ಶಿವಲಿಂಗದ ಒಂದಷ್ಟು ಫೊಟೋಗಳನ್ನು ಸಹ ಈ ತಂಡ ಪ್ರಕಟಿಸಿದೆ.

ಈ ಋತುವಿನಲ್ಲಿ ಅಮರನಾಥ ಯಾತ್ರೆ ಕೈಗೊಂಡಿರುವ ಮೊದಲ ತಂಡ ನಮ್ಮದಾಗಿದೆ ಎಂದು ಎಂಟು ಜನ ಯಾತ್ರಿಕರ ಈ ಗುಂಪು ಹೇಳಿಕೊಂಡಿದೆ. ಎಪ್ರಿಲ್‌ ಕೊನೆಯ ವಾರದಲ್ಲಿ 20ನೇ ತಾರೀಖೀನಿಂದ 25ರವರೆಗೆ ತಾವು ಅಮರನಾಥ ಗುಹಾಲಯಕ್ಕೆ ತೆರಳಿರುವುದಾಗಿಯೂ ಈ ತಂಡ ಇದೀಗ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ನೈಸರ್ಗಿಕ ಸ್ವರೂಪದ ಹಿಮರೂಪಿ ಶಿವಲಿಂಗವು ಈ ವರ್ಷ ಇನ್ನಷ್ಟು ದೊಡ್ಡದಾಗಿ ಕಾಣಿಸುತ್ತಿದೆ ಎಂದು ಯಾತ್ರಿಗಳ ತಂಡ ಹೇಳಿಕೊಂಡಿದೆ ಮತ್ತು ಅಮರನಾಥಕ್ಕೆ ಸಾಗುವ ದಾರಿಯಲ್ಲಿ ಈಗಲೂ10-15 ಅಡಿಗಳಷ್ಟು ಹಿಮ ತುಂಬಿಕೊಂಡಿದೆ ಎಂದು ಈ ಯಾತ್ರಾರ್ಥಿಗಳ ತಂಡ ತಿಳಿಸಿದೆ.

ವಿಚಿತ್ರವೆಂದರೆ ಅಮರನಾಥ ಯಾತ್ರೆಯನ್ನು ಸಂಘಟಿಸುವ ಶ್ರೀ ಅಮರನಾಥ್‌ ಜೀ ದೇವಸ್ಥಾನ ಮಂಡಳಿಯ ಅಧಿಕಾರಿಗಳೇ ಈ ಬಾರಿ ಇನ್ನೂ ಗುಹಾಲಯಕ್ಕೆ ಭೇಟಿ ನೀಡಿಲ್ಲ. ಈ ಎಂಟು ಜನ ಯತ್ರಾರ್ಥಿಗಳ ತಂಡ ಅಲ್ಲಿ ತೆರಳಿರುವುದನ್ನು ಅಧಿಕೃತವಾಗಿ ಮಂಡಳಿಯು ಇನ್ನೂ ದೃಢಪಡಿಸಿಲ್ಲ.

ಈ ಬಾರಿಯ 46 ದಿನಗಳ ಅಮರನಾಥ ಯಾತ್ರೆಯು ಜುಲೈ 01ರ ಮಾಸ ಶಿವರಾತ್ರಿ ದಿನದಂದು ಪ್ರಾರಂಭಗೊಳ್ಳಲಿದೆ ಹಾಗೂ ಆಗಸ್ಟ್‌ 15ರ ಶ್ರಾವಣ ಪೌರ್ಣಮಿ ಮತ್ತು ರಕ್ಷಾ ಬಂಧನದ ದಿನ ಯಾತ್ರ ಸಂಪನ್ನಗೊಳ್ಳಲಿದೆ.

ಅಮರನಾಥ ಗುಹಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಸಾಮಾನ್ಯವಾಗಿ ಎರಡು ಮಾರ್ಗಗಳಲ್ಲಿ ಈ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಒಂದು ಅನಂತನಾಗ್‌ ಜಿಲ್ಲೆಯಲ್ಲಿರುವ ಸಾಂಪ್ರದಾಯಿಕ ಪಹಾಲ್ಗಂ ಮಾರ್ಗವಾದರೆ ಇನ್ನೊಂದು ಗಂದೇರ್‌ ಬಾಲ್‌ ಜಿಲ್ಲೆಯ ಮೂಲಕ ಸಾಗುವ ಬಾಲ್ಟಲ್‌ ಹಾದಿ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.