ಸಮರ ವೀರ ಸಿಂಗ್ಗೆ ಕಣ್ಣೀರ ವಿದಾಯ
Team Udayavani, Sep 19, 2017, 7:20 AM IST
ನವದೆಹಲಿ: ಎರಡು ದಿನಗಳ ಹಿಂದೆ ನಿಧನರಾದ ವಾಯುಪಡೆ ಮಾರ್ಷಲ್ ಅರ್ಜನ್ ಸಿಂಗ್ ಅವರ ಅಂತ್ಯಸಂಸ್ಕಾರ ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ಬ್ರಾರ್ ಸ್ಕ್ವೇರ್ನಲ್ಲಿ ನೆರವೇರಿತು. 1965ರ ಭಾರತ-ಪಾಕ್ ಯುದ್ಧದಲ್ಲಿ ಮಹತ್ವದ ಪಾತ್ರ ನಿರ್ವಹಿಸುವ ಮೂಲಕ ವಿಜಯಪತಾಕೆ ಹಾರಿಸಿದ್ದ ಸಮರ ವೀರನಿಗೆ ಸೇನೆಯ ಹಿರಿಯ ಅಧಿಕಾರಿಗಳು, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖ ರಾಜಕಾರಣಿಗಳು ಹಾಗೂ ಗಣ್ಯರು ಅಂತಿಮ ನಮನ ಸಲ್ಲಿಸಿದರು. 17 ಗನ್ ಸೆಲ್ಯೂಟ್ ಹಾಗೂ ವಾಯುಪಡೆಯ ಸುಖೋಯ್ ಯುದ್ಧ ವಿಮಾನ ಮತ್ತು ಐಎಎಫ್ ಮಿ-17 ವಿ5 ಹೆಲಿಕಾಪ್ಟರ್ ಹಾರಾಟದ ಮೂಲಕ ಹುತಾತ್ಮ ಸಿಂಗ್ಗೆ ಗೌರವ ಸಲ್ಲಿಸಲಾಯಿತು. ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಯಿತು. ಶನಿವಾರ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅರ್ಜನ್ ಸಿಂಗ್ ಅವರು ನಿಧನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು