ವಾಹನ ತಪಾಸಣೆ-ಟ್ರಾಫಿಕ್ ಪೊಲೀಸ್ ಜತೆ ವಾಗ್ವಾದ; ಹೃದಯಾಘಾತದಿಂದ ಟೆಕ್ಕಿ ಸಾವು
Team Udayavani, Sep 10, 2019, 10:59 AM IST
ನೋಯ್ಡಾ:ಸಂಚಾರಿ ನಿಯಮ ಉಲ್ಲಂಘಿಸಿದ್ದ ಯುವಕನೊಬ್ಬ ಟ್ರಾಫಿಕ್ ಪೊಲೀಸ್ ಬಳಿ ತೀವ್ರ ಮಾತಿನ ಚಕಮಕಿಯಿಂದ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
35 ವರ್ಷದ ಯುವಕ ಸಾಫ್ಟ್ ವೇರ್ ಕಂಪನಿ ಉದ್ಯೋಗಿ ತನ್ನ ಕಾರಿನಲ್ಲಿ ಪೋಷಕರ ಜತೆ ಕಾರಿನಲ್ಲಿ ಆಗಮಿಸುತ್ತಿದ್ದ ವೇಳೆ ಗಾಜಿಯಾಬಾದ್ ಸಮೀಪ ತಪಾಸಣೆಗಾಗಿ ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಘಟನೆ ಬಗ್ಗೆ ತನಿಖೆ ನಡೆಸಿದ್ದು, ಆ ಯುವಕ ಡಯಾಬಿಟೀಸ್ ನಿಂದ ಬಳಲುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಗೌತಮ್ ಬುದ್ಧ ನಗರ ಎಸ್ ಎಸ್ ಪಿ ವೈಭವ್ ಕೃಷ್ಣಾ ತಿಳಿಸಿದ್ದಾರೆ.
ನೂತನ ಸಂಚಾರಿ ನಿಯಮದ ಹೆಸರಿನಲ್ಲಿ ಟ್ರಾಫಿಕ್ ಪೊಲೀಸ್ ತಮ್ಮ ಮಗನ ಬಳಿ ಅನುಚಿತವಾಗಿ ವರ್ತಿಸಿರುವುದಾಗಿ 65ವರ್ಷದ ತಂದೆ ಆರೋಪಿಸಿದ್ದಾರೆ. ಯಾವುದೇ ವಿಚಾರಣೆಗೂ ಒಂದು ನಿಯಮವಿದೆ. ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಬಹುದಿತ್ತು. ನಾವು ವಯಸ್ಸಾದವರು ಕಾರಿನೊಳಗೆ ಕುಳಿತಿದ್ದಾಗ, ದಿಢೀರನೆ ಕಾರನ್ನು ತಡೆದು ತಮ್ಮ ದೊಣ್ಣೆಯಿಂದ ಕಾರಿಗೆ ಹೊಡೆದಿದ್ದರು. ಈ ರೀತಿ ವರ್ತಿಸಲು ಕಾನೂನಿನಲ್ಲಿ ಅವಕಾಶವಿದಯೇ ಎಂಬುದು ನನಗೆ ಗೊತ್ತಿಲ್ಲ ಎಂದು ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಭಾನುವಾರ ಸಂಜೆ 6ಗಂಟೆ ನಡೆದಿತ್ತು. ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ನನ್ನ 5 ವರ್ಷದ ಮೊಮ್ಮಗಳು ತಂದೆಯನ್ನು ಕಳೆದುಕೊಂಡಿರುವುದಾಗಿ ಯುವಕನ ತಂದೆ ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!