Crime: ಜಾತ್ರೆ ನೋಡಲು ಬಂದ ಬಾಲಕಿಯನ್ನು ಅಪಹರಿಸಿ,ಸಾಮೂಹಿಕ ಅತ್ಯಾಚಾರ; 7 ಮಂದಿ ಬಂಧನ
Team Udayavani, Mar 13, 2024, 10:17 AM IST
ಚೆನ್ನೈ: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ʼ
ಮಾ. 9 ರಂದು 17 ವರ್ಷದ ಬಾಲಕಿ ವೀರಕುಮಾರಸ್ವಾಮಿ ದೇವಸ್ಥಾನದ ರಥೋತ್ಸವ ನೋಡಲು ವೆಲ್ಲಕೋವಿಲ್ಗೆ ಗ್ರಾಮಕ್ಕೆ ಭೇಟಿ ನೀಡಿದ್ದಳು. ಈ ವೇಳೆ ಏಳು ಮಂದಿ ಬಾಲಕಿಯನ್ನು ಅಪಹರಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಬಾಲಕಿಯ ಮನೆಯವರು ದೂರನ್ನು ನೀಡಿದ್ದಾರೆ. ಪೊಲೀಸರು ಘಟನಾ ಸಂಬಂಧ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡವನ್ನು ರಚಿಸಿ, ಕಾಮರಾಜಪುರಂನ 32 ವರ್ಷದ ಆರೋಪಿ ಮತ್ತು 29 ವರ್ಷದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ತೀವ್ರ ವಿಚಾರಣೆ ಬಳಿಕ ಉಳಿದವರನ್ನು ಬಂಧಿಸಲಾಗಿದೆ. ಕೃತ್ಯವೆಸಗಿಗ 7 ಮಂದಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!