ಸೈನಿಕನನ್ನು ಚಚ್ಚಿದ ಬಿಹಾರದ ಉದ್ರಿಕ್ತ ಗುಂಪು: ತೇಜಸ್ವಿ ವಿಡಿಯೋ
Team Udayavani, May 5, 2018, 11:57 AM IST
ಹೊಸದಿಲ್ಲಿ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧದ ಹೊಸ ದಾಳಿಯೊಂದರಲ್ಲಿ ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರು ನಿನ್ನೆ ಶುಕ್ರವಾರ ತಮ್ಮ ಅಧಿಕೃತ ಟ್ವಿಟರ್ ಖಾತೆಗೆ ವಿವಾದಾತ್ಮಕ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ.
ಈ ವಿಡಿಯೋದಲ್ಲಿ ಬಿಹಾರದ ಉದ್ರಿಕ್ತ ಜನಸಮೂಹವೊಂದು ವ್ಯಕ್ತಿಯನ್ನು ಹಿಡಿದು ನಿರ್ದಯವಾಗಿ ಚಚ್ಚುತ್ತಿರುವುದು ಕಂಡು ಬರುತ್ತದೆ. ಈ ವಿಡಿಯೋದಲ್ಲಿ ಮಾರಣಾಂತಿಕ ಹಲ್ಲೆಗೆ ಗುರಿಯಾಗುತ್ತಿರುವ ವ್ಯಕ್ತಿಯು ಸೇನೆಯ ಒಬ್ಬ ಯೋಧ ಎಂದು ಹೇಳುವ ತೇಜಸ್ವಿ, “ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಗತಿ ಹೀಗೇಕೆ ಇದೆ’ ಎಂದು ಸಿಎಂ ನಿತೀಶ್ ಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.
ಆದರೆ ತೇಜಸ್ವಿ ಅಪ್ಲೋಡ್ ಮಾಡಿರುವ ವಿಡಿಯೋ ಗ್ರಾಫಿಕ್ ಸ್ವರೂಪದಲ್ಲಿದ್ದು ಅದರ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಝೀ ನ್ಯೂಸ್ ವರದಿ ಮಾಡಿದೆ.
ತೇಜಸ್ವಿ ಯಾದವ್ ಹೇಳಿರುವ ಪ್ರಕಾರ ವ್ಯಕ್ತಿಯೊಬ್ಬನನ್ನು ಉದ್ರಿಕ್ತ ಗುಂಪು ಮಾರಣಾಂತಿಕವಾಗಿ ಚಚ್ಚುವ ಈ ಘಟನೆಯು ಪೊಲೀಸ್ ಠಾಣೆಯೊಂದರ ಸಮೀಪವೇ ನಡೆದಿದೆ. ರಾಜ್ಯದಲ್ಲಿ ಜನರಿಗೆ ಈ ರೀತಿ ಕಾನೂನನ್ನು ಕೈಗತ್ತಿಕೊಳ್ಳಲು ಬಿಟ್ಟಿರುವುದಾದರೂ ಏಕೆ ಎಂದು ತೇಜಸ್ವಿ ಅವರು ನಿತೀಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಘಟನೆ ನಡೆದ ಸ್ಥಳ, ದಿನ ಇತ್ಯಾದಿಗಳ ಯಾವುದೇ ವಿವರಗಳನ್ನು ಅವರು ನೀಡಿಲ್ಲ.
ಆರ್ಜೆಡಿ ಮುಖ್ಯಸ್ಥರಾಗಿರುವ ತಮ್ಮ ತಂದೆ ಲಾಲು ಪ್ರಸಾದ್ ಯಾದವ್ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಯಿಂದ ರಾಂಚಿಯ ಆಸ್ಪತ್ರೆಗೆ ವರ್ಗಾಯಿಸುವ ಮೂಲಕ ಕೊಲೆ ಸಂಚು ನಡೆಸಲಾಗಿದೆ ಎಂದು ಆರೋಪಿಸಿರುವ ತೇಜಸ್ವಿ ಅವರು ಈಚೆಗೆ ತಮ್ಮ ತಾಯಿ, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ಭದ್ರತೆಯನ್ನು ಕಿತ್ತು ಹಾಕಿ ಅನಂತರ ಪುನರ್ಸ್ಥಾಪಿಸಿರುವುದನ್ನು ರಾಜಕೀಯ ಪಿತೂರಿ ಎಂದು ವರ್ಣಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ