ಮೊದಲ ದಿನವೇ ಸೂರ್ಯ-ಪ್ರಜ್ವಲ

ಯುವ ಸಂಸದರ ನಡುವೆ ಮಾತಿನ ಚಕಮಕಿ

Team Udayavani, Jun 26, 2019, 6:00 AM IST

40

ನವದೆಹಲಿ: ಸಂಸತ್‌ನ ಮಂಗಳವಾರದ ಕಲಾಪವು ಕರ್ನಾಟಕದ ಇಬ್ಬರು ಯುವ ಸಂಸದರ ವಾಗ್ವಾದ ಹಾಗೂ ಮಾತಿನ ಸಮರಕ್ಕೆ ಸಾಕ್ಷಿಯಾಯಿತು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರು ಲೋಕಸಭೆ ಕಲಾಪದ ವೇಳೆ ತಮ್ಮ ವಾಕ್ಚಾತುರ್ಯ ಪ್ರದರ್ಶಿಸಿದ್ದು ಮಾತ್ರವಲ್ಲದೆ, ಪರಸ್ಪರರ ಕಾಲೆಳೆದುಕೊಂಡಿದ್ದೂ ಕಂಡುಬಂತು.

ಇವರು ಮಾತ್ರವಲ್ಲದೆ, ಇದೇ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿರುವ ಅನೇಕ ಯುವ ನಾಯಕರು ಸದನದಲ್ಲಿ ನಿರರ್ಗಳವಾಗಿ ಮಾತನಾಡಿದ್ದು, ಪ್ರಧಾನಿ ಮೋದಿ ಅವರ ಮೆಚ್ಚುಗೆಗೂ ಪಾತ್ರವಾಯಿತು. ರಾಷ್ಟ್ರಪತಿ ಕೋವಿಂದ್‌ ಅವರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ವೇಳೆ ಪ್ರಧಾನಿ ಮೋದಿ ಅವರು, ಸಂಸತ್‌ನಲ್ಲಿ ಮಾತನಾಡಿದ ನೂತನ ಸಂಸದರನ್ನು ಅಭಿನಂದಿಸಿದರು.

ತೇಜಸ್ವಿ ವರ್ಸಸ್‌ ಪ್ರಜ್ವಲ್: ರಾಜ್ಯದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಐಎಂಎ ಹಗರಣ ಕುರಿತು ಸಂಸತ್‌ನಲ್ಲಿ ಪ್ರಸ್ತಾಪಿಸಿದ ತೇಜಸ್ವಿ ಸೂರ್ಯ, ‘ಐಎಂಎ ಹಗರಣದ ಕಿಂಗ್‌ಪಿನ್‌ ವಿರುದ್ಧ 10 ಸಾವಿರಕ್ಕೂ ಹೆಚ್ಚು ಎಫ್ಐಆರ್‌ ದಾಖಲಾಗಿವೆ. ಸಾವಿರಾರು ಮಂದಿಗೆ ವಂಚಿಸಲಾಗಿದೆ’ ಎಂದು ಹೇಳಿದ್ದು, ಸದ್ಯ ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವು ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಸದನದಲ್ಲೇ ತಿರುಗೇಟು ನೀಡಿದ ಪ್ರಜ್ವಲ್ ರೇವಣ್ಣ, ‘ಐಎಂಎ ಹಗರಣದ ತನಿಖೆಗೆಂದೇ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ತನಿಖೆಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಈ ವಿಚಾರದಲ್ಲಿ ನನ್ನ ಸಹೋದರನಾದ ತೇಜಸ್ವಿ ಸೂರ್ಯ ಅವರು ಸಂಸತ್‌ನ ಹಾದಿ ತಪ್ಪಿಸುತ್ತಿರುವುದು ಸರಿಯಲ್ಲ’ ಎಂದು ಹೇಳಿದರು. ಜತೆಗೆ, ‘ಕರ್ನಾಟಕವು ಅತ್ಯಂತ ಭ್ರಷ್ಟ ರಾಜ್ಯ ಎಂದೆಲ್ಲ ಹೇಳುತ್ತಾ ಕೊಳಕು ರಾಜಕೀಯ ಮಾಡುವ ಬದಲು ರಾಜ್ಯದಲ್ಲಿನ ನೀರಿನ ಸಮಸ್ಯೆ, ರೈತರ ಸಮಸ್ಯೆಗಳ ಪರಿಹಾರದತ್ತ ಮುಖ ಮಾಡಬೇಕು’ ಎಂದು ಹೇಳಿದರು.

ಕಾಂಗ್ರೆಸ್‌ ಕಾಲೆಳೆದ ತೇಜಸ್ವಿ ಸೂರ್ಯ: ದೀರ್ಘಾವಧಿಯಿಂದಲೂ ರಾಜಕೀಯ ಎನ್ನುವುದು ಒಂದು ಕುಟುಂಬದ ಬ್ಯುಸಿನೆಸ್‌ನಂತಾಗಿತ್ತು. ಆದರೆ, ಈ ಬಾರಿ ಪ್ರಧಾನಮಂತ್ರಿಯವರ ಗೆಲುವು ನವಭಾರತದ ಗೆಲುವಿದ್ದಂತೆ ಎಂದು ಭಾವಿಸಿ ಪ್ರತಿಯೊಬ್ಬ ಜನಸಾಮಾನ್ಯನೂ ಚುನಾವಣೆಯಲ್ಲಿ ಹೋರಾಡಿದ್ದಾನೆ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿಪಕ್ಷ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ. ಜತೆಗೆ, ಪ್ರತಿಪಕ್ಷಗಳು ಈಗಲೂ ಪಾಠ ಕಲಿತಿದೆ ಎಂದು ನನಗೆ ಅನಿಸುತ್ತಿಲ್ಲ. ಅವರಲ್ಲಿ ಒಂದು ರೀತಿಯ ಅಹಂ ಇದೆ. ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಹಗರಣಗಳೇ ತುಂಬಿ ತುಳುಕಿವೆ ಎಂದೂ ಆರೋಪಿಸಿದ್ದಾರೆ. ಚಾಯ್‌ವಾಲಾವೊಬ್ಬರು ಸತತ 2ನೇ ಬಾರಿಗೆ ಆಡಳಿತದ ಚುಕ್ಕಾಣಿ ಹಿಡಿದುರುವುದು ದೇಶದ ಪ್ರಜಾತಂತ್ರವು ಬಲಿಷ್ಠವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದ ಅವರು, 2014ರಲ್ಲಿ ನವಭಾರತದ ಉದಯವಾಯಿತು. ಕಾನೂನಿನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಆಗಿರದಿದ್ದರೂ, ಒಬ್ಬ ಉತ್ತಮ ನಾಯಕನು ಉತ್ತಮ ಆಡಳಿತವನ್ನು ಒದಗಿಸಿರುವುದು ನಿಜ ಎಂದಿದ್ದಾರೆ. ಇದೇ ವೇಳೆ, ಭಾರತದ ಹೊರಗೆ ಭಾರತೀಯರು ಅದ್ಭುತ ಸಾಧನೆ ಮಾಡುತ್ತಾರೆ ಎಂದರೆ, ಭಾರತದೊಳಗೆ ಏಕೆ ಅದು ಸಾಧ್ಯವಿಲ್ಲ ಎಂದೂ ಅವರು ಪ್ರಶ್ನಿಸಿದ್ದಾರೆ.

ಮಂಡ್ಯ ರೈತರನ್ನು ನೆನೆದ ಪ್ರಜ್ವಲ್ ರೇವಣ್ಣ
ರಾಜ್ಯದಲ್ಲಿನ ನೀರಿನ ಸಮಸ್ಯೆ ಹಾಗೂ ರೈತರ ಸಂಕಷ್ಟಗಳ ಬಗ್ಗೆ ಸಂಸತ್‌ನಲ್ಲಿ ಧ್ವನಿಯೆತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಈ ವಿಚಾರದಲ್ಲಿ ರಾಜಕೀಯ ಬಿಟ್ಟು ಸಮಸ್ಯೆಗಳ ಪರಿಹಾರದತ್ತ ಗಮನ ಹರಿಸಬೇಕು ಎಂದು ಕೋರಿಕೊಂಡಿದ್ದಾರೆ. ಸಾಲದ ಸುಳಿಗೆ ಸಿಲುಕಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಮಾತನಾಡುವ ವೇಳೆ ಪ್ರಜ್ವಲ್ ಅವರು ವಿಶೇಷವಾಗಿ ಮಂಡ್ಯ ರೈತರ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ನೀರಿನ ಸಮಸ್ಯೆ, ರೈತರ ಆತ್ಮಹತ್ಯೆ, ಅನ್ನದಾತರ ಸಂಕಷ್ಟಗಳನ್ನು ದಯವಿಟ್ಟು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕು. ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೋರಿಕೊಂಡರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.