ತನಿಖೆಯಲ್ಲಿ ಬಯಲು! ಸ್ಕೂಟಿ ಟಯರ್ ಪಂಕ್ಚರ್ ಹಾಕಿಸೋ ನೆಪದಲ್ಲಿ ವೈದ್ಯೆ ಮೇಲೆ ಗ್ಯಾಂಗ್ ರೇಪ್
Team Udayavani, Nov 30, 2019, 4:14 PM IST
ಹೈದರಾಬಾದ್: ಹೈದರಾಬಾದ್ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹತ್ಯೆಗೈದಿರುವ ಪ್ರಕರಣದ ಆರೋಪಿಗಳಿಗೆ ಯಾವುದೇ ರೀತಿಯ ಕಾನೂನು ನೆರವು ನೀಡದಿರಲು ಶಾದ್ ನಗರ್ ನ ವಕೀಲರ (ಬಾರ್) ಸಂಘ ನಿರ್ಧರಿಸಿದೆ ಎಂದು ವರದಿ ತಿಳಿಸಿದೆ.
ವೈದ್ಯೆಯ ಮೇಲೆ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಶುಕ್ರವಾರ ತಡರಾತ್ರಿ ಮೊಹಮ್ಮದ್ ಅರೀಫ್, ಜೋಲ್ಲು ಶಿವ, ಜೋಲ್ಲು ನವೀನ್ ಮತ್ತು ಚಿಂಟಾಕುಂಟಾ ಚೆನ್ನಕೇಶವಲು ಎಂಬಾತ ಸೇರಿ ನಾಲ್ವರನ್ನು ಬಂಧಿಸಿದ್ದರು.
ಈ ಪ್ರಕರಣವನ್ನು ಮಹಬೂಬ್ ನಗರ್ ಶೀಘ್ರ ವಿಚಾರಣಾ ನ್ಯಾಯಾಲಯಕ್ಕೆ ಹಸ್ತಾಂತರಿಸುವುದಾಗಿ ಸೈಬರಾಬಾದ್ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಪ್ರಾಸಿಕ್ಯೂಷನ್ ಆರೋಪಿಗಳಿಗೆ ಗರಿಷ್ಠ ಪ್ರಮಾಣವದ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿಕೊಳ್ಳಲಿದೆ ಎಂದರು.
ನಾಲ್ವರು ಪೈಶಾಚಿಕವಾಗಿ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಚಾಪೆಯಲ್ಲಿ ಸುತ್ತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಕೊಂದಿದ್ದರು. ಗುರುವಾರ ಬೆಳಗ್ಗೆ ಸುಟ್ಟು ಹೋದ ವೈದ್ಯೆಯ ಶವ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಈ ಪೈಶಾಚಿಕ ಕೃತ್ಯದ ವಿವರ ಬಹಿರಂಗಗೊಂಡಿತ್ತು.
ಪೂರ್ವ ಯೋಜಿತ ಕೃತ್ಯ?
ಟೋಲ್ ಪ್ಲಾಝಾ ಸಮೀಪ ನಿಲ್ಲಿಸಿದ್ದ ಸ್ಕೂಟಿಯನ್ನು ತೆಗೆದುಕೊಂಡು ಹೋಗಲು 9ಗಂಟೆ ರಾತ್ರಿಗೆ ವೈದ್ಯೆ ಸ್ಥಳಕ್ಕೆ ಆಗಮಿಸಿದ್ದಳು. ಈ ಸಂದರ್ಭದಲ್ಲಿ ಆರೀಫ್, ನಿನ್ನ ಸ್ಕೂಟಿ ಪಂಕ್ಚರ್ ಆಗಿದೆ ಎಂದು ಹೇಳಿದ್ದ. ನಾನು ನಿಮಗೆ ಸಹಾಯ ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದ. ಸ್ಕೂಟಿ ಟಯರ್ ಗೆ ಪಂಕ್ಚರ್ ಹಾಕಿಸಿಕೊಂಡು ಬರುವಂತೆ ಶಿವನ ವಾಹನದಲ್ಲಿ ಕಳುಹಿಸಿಕೊಟ್ಟಿದ್ದ ಎಂದು ಹೇಳಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಮತ್ತೊಂದು ವಾಹನಕ್ಕಾಗಿ ಸಂತ್ರಸ್ತೆ ಕಾಯುತ್ತಿದ್ದ ವೇಳೆ ಆರೀಫ್ ಮತ್ತು ಇತರ ಮೂವರು ಆಕೆಯನ್ನು ಬಲವಂತವಾಗಿ ಹಿಡಿದು ಮುಖ್ಯರಸ್ತೆಯಿಂದ ದೂರ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು ಎಂದು ಹೇಳಿದರು.
ಸಂತ್ರಸ್ತೆ 9.45ರ ಹೊತ್ತಿಗೆ ಸಹೋದರಿಗೆ ಕರೆ ಮಾಡಿ, ತನ್ನ ಸ್ಕೂಟಿ ಪಂಕ್ಚರ್ ಆಗಿದ್ದು..ಯಾರೋ ತನಗೆ ಸಹಾಯ ಮಾಡುತ್ತಾರೆ ಎಂದು ಹೇಳಿದ್ದಾರೆ. ಅವರು ಪಂಕ್ಚರ್ ಹಾಕಿಸಲು ಸ್ಕೂಟಿಯನ್ನು ತೆಗೆದುಕೊಂಡು ಹೋಗಿದ್ದಾರೆ. ತನಗೆ ಭಯವಾಗುತ್ತಿದೆ ಇಲ್ಲಿ ಸುತ್ತಮುತ್ತ ಲಾರಿ ಡ್ರೈವರ್ಸ್ ಇದ್ದಿರುವುದಾಗಿ ಆತಂಕ ವ್ಯಕ್ತಪಡಿಸಿದ್ದರಂತೆ. ಆಗ ಆಕೆ ವಾಹನ ಬಿಟ್ಟು ಟೋಲ್ ಪ್ಲಾಝಾದ ಬಳಿ ಬಂದು ಬೇರೆ ವಾಹನದಲ್ಲಿ ಬರುವಂತೆ ಸಲಹೆ ನೀಡಿರುವುದಾಗಿ ವರದಿ ವಿವರಿಸಿದೆ. ನಂತರ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ವರದಿ ತಿಳಿಸಿದೆ. ನಾಲ್ವರಲ್ಲಿ ಮೊಹಮ್ಮದ್ ಆರೀಫ್ ಲಾರಿ ಚಾಲಕನಾಗಿದ್ದು, ಉಳಿದ ಮೂವರು ಲಾರಿ ಕ್ಲೀನರ್ಸ್ ಆಗಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ