ತಾಯಿಗೆ ಪರೀಕ್ಷೆ; ಶಿಶುವಿಗೆ ಖಾಕಿ ರಕ್ಷೆ
Team Udayavani, Oct 1, 2018, 8:10 AM IST
ಹೈದರಾಬಾದ್: ಸಾಮಾನ್ಯವಾಗಿ ಪೊಲೀಸರು ಕಠಿಣ ಹೃದಯಿಗಳಾಗಿರುತ್ತಾರೆ ಎನ್ನುವ ಅಭಿಪ್ರಾಯ ಕೆಲವರಲ್ಲಿದೆ. ಆದರೆ ತೆಲಂಗಾಣದ ಮೆಹಬೂಬ್ನಗರದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರ ಕೆಲಸ ಆ ಅಭಿಪ್ರಾಯವನ್ನು ಬದಲಾಯಿಸಿದೆ. ಇತ್ತೀಚೆಗೆ ತೆಲಂಗಾಣ ಸರಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದಕ್ಕಾಗಿ ತಾಯಿಯೊಬ್ಬರು ತನ್ನ ಶಿಶುವಿನೊಂದಿಗೆ ಮೆಹಬೂಬ್ನಗರಕ್ಕೆ ಬಂದಿದ್ದರು.
ಪರೀಕ್ಷಾ ಕೇಂದ್ರದೊಳಕ್ಕೆ ಶಿಶುವನ್ನು ಕರೆದೊಯ್ಯಲು ಅವಕಾಶ ಇಲ್ಲದ ಕಾರಣ, ಮೂಸಾಪೇಟೆ ಠಾಣೆಯ ಹೆಡ್ ಕಾನ್ ಸ್ಟೇಬಲ್ ಮುಜೀಬುರ್ ರೆಹಮಾನ್ ಅವರು, ಆ ಮಗುವನ್ನು ತಾವೇ ಎತ್ತಿಕೊಂಡು, ತಾಯಿಯನ್ನು ಪರೀಕ್ಷಾ ಕೇಂದ್ರದೊಳಕ್ಕೆ ಕಳುಹಿಸಿದರು. ಮಹಿಳೆಯು ನಿಶ್ಚಿಂತೆಯಿಂದ ಪರೀಕ್ಷೆ ಬರೆದು ಮುಗಿಸಿ ಬರುವವರೆಗೂ, ರೆಹಮಾನ್ ಅವರು ಮಗುವನ್ನು ಎತ್ತಿಕೊಂಡು, ಅದರ ಆರೈಕೆ ಮಾಡಿದ್ದಾರೆ.
ಅವರ ಫೋಟೋವನ್ನು ಕಾಲೇಜು ವಿದ್ಯಾರ್ಥಿಗಳು ಕ್ಲಿಕ್ಕಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಮ ರಾಜೇಶ್ವರಿ ಈ ಫೋಟೋವನ್ನು ‘ಪರೀಕ್ಷೆ ಬರೆಯುವ ತಾಯಿ ಬರುವವರೆಗೆ ಅಳುವ ಮಗುವನ್ನು ಸಂತೈಸುತ್ತಿರುವುದು’ ಎಂಬ ಶಿರೋನಾಮೆ ಹಾಕಿ ಟ್ವೀಟ್ ಮಾಡಿದ್ದರು. ಅದು ಈಗ ವೈರಲ್ ಆಗಿದ್ದು, ರೆಹಮಾನ್ರ ಕೆಲಸ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ