ತೆಲಂಗಾಣದಲ್ಲಿ ಕೆಸಿಆರ್‌ ಗರ್ವಭಂಗ

ಭಗ್ನವಾಯಿತು ಕಿಂಗ್‌ಮೇಕರ್‌ ಆಗುವ ಕನಸು

Team Udayavani, May 24, 2019, 1:21 PM IST

tl

ಕಳೆದ ವರ್ಷದ ಡಿಸೆಂಬರ್‌ನಲ್ಲಿ ತೆಲಂಗಾಣ ವಿಧಾನ  ಸಭೆಗೆ ನಡೆದಿದ್ದ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಭರ್ಜರಿ ಜಯ ಸಾಧಿಸಿತ್ತು. 119 ವಿಧಾನಸಭಾ ಕ್ಷೇತ್ರಗಳ ಪೈಕಿ 88ರಲ್ಲಿ ಹಾಲಿ ಆಡಳಿತ ಪಕ್ಷ ಗೆದ್ದಿತ್ತು. ಅದೇ ಮಾದರಿಯಲ್ಲಿ 17ರ ಪೈಕಿ 16ನ್ನು ಅನಾಯಾಸವಾಗಿ ಗೆದ್ದುಕೊಳ್ಳಬಹುದು ಎಂದು ನಿರೀಕ್ಷೆ ಮಾಡಿದ್ದರು. ಆದರೆ ಅವರ ನಿರೀಕ್ಷೆ ಸುಳ್ಳಾಗಿದೆ. ಟಿಆರ್‌ಎಸ್‌ 10 ಕ್ಷೇತ್ರಗಳಲ್ಲಿ ಗೆದ್ದರೆ, ಚಂದ್ರಶೇಖರ ರಾವ್‌ ಅವರ ಭದ್ರ ಕೋಟೆಯಲ್ಲಿ ಬಿಜೆಪಿ-4, ಕಾಂಗ್ರೆಸ್‌-3, ಎಐಎಂಐಎಂ-1 ಕ್ಷೇತ್ರಗಳಲ್ಲಿ ಗೆದ್ದುಕೊಂಡಿದೆ.

ಅಡಿಲಾಬಾದ್‌ನಲ್ಲಿ ಬಿಜೆಪಿಯ ಸೋಯಂ ಬಾಪು ರಾವ್‌ ಟಿಆರ್‌ಎಸ್‌ನ ಗೋಡಂ ನಾಗೇಶ್‌ ವಿರುದ್ಧ, ನಿಜಾಮಾಬಾದ್‌ನಲ್ಲಿ ಬಿಜೆಪಿಯ ಅರ ವಿಂದ ಧರ್ಮಪುರಿ ಟಿಆರ್‌ಎಸ್‌ ಅಭ್ಯರ್ಥಿ, ಹಾಲಿ ಸಂಸದೆ ಕೆ.ಕವಿತಾ ವಿರುದ್ಧ ಗೆಲವು ಸಾಧಿಸಿದ್ದಾರೆ. ಟಿಆರ್‌ಎಸ್‌ನ ಪ್ರಮುಖ ನಾಯಕ, ಹಾಲಿ ಸಂಸದ ವಿನೋದ್‌ ಕುಮಾರ್‌ ಬಿನಪ್ಪಲ್ಲಿ ಬಿಜೆಪಿಯ ಬಂಡಿ ಸಂಜಯ ಕುಮಾರ್‌ ವಿರುದ್ಧ ಕರೀಂನಗರ್‌ನಲ್ಲಿ ಸೋಲು ಅನುಭವಿಸಿದ್ದಾರೆ. ಇನ್ನು ಸಿಕಂದರಾಬಾದ್‌ನಲ್ಲಿ ಜಿ.ಕಿಶನ್‌ ರೆಡ್ಡಿ ಜಯ ಸಾಧಿಸಿದ್ದಾರೆ.

ನಲಗೊಂಡಾದಲ್ಲಿ ಕಾಂಗ್ರೆಸ್‌ನ ಉತ್ತಮ ಕುಮಾರ್‌ ರೆಡ್ಡಿ ಗುತ್ತ ಸುಖೇಂದರ್‌ ರೆಡ್ಡಿ ವಿರುದ್ಧ ಜಯಸಾಧಿಸಿದ್ದಾರೆ. ಬೋಂಗಿರ್‌ನಲ್ಲಿ ಕಾಂಗ್ರೆಸ್‌ನ ಕೋಮಟಿ ರೆಡ್ಡಿ ವೆಂಕಟ ರೆಡ್ಡಿ ಟಿಆರ್‌ಎಸ್‌ನ ಡಾ. ಬೂರಾ ನರಸಯ್ಯ ಗೌಡ್‌ ವಿರುದ್ಧ ಜಯ ಸಾಧಿಸಿ ದ್ದಾರೆ. ಇತ್ತೀಚೆಗೆ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿಯೂ ಕೂಡ ಟಿಆರ್‌ಎಸ್‌ ಉತ್ತಮ ಸಾಧನೆ ಮಾಡಲಿದೆ ಎಂದು ಪ್ರಸ್ತಾಪ ಮಾಡಲಾಗಿತ್ತು. ಫೆಡರಲ್‌ ಫ್ರಂಟ್‌ ರಚನೆ ಮಾಡುವ ಉದ್ದೇಶದಿಂದಲೇ ಹೈದರಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಅಸಾದುದ್ದೀನ್‌ ಒವೈಸಿ ಅವರ ಎಎಂಐಎಂ ಪಕ್ಷದ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದರು ಮತ್ತು ಆ ಕ್ಷೇತ್ರದಲ್ಲಿ ಟಿಆರ್‌ಎಸ್‌ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ.

ಸೋತ ಕವಿತಾ
ನಿಜಾಮಾಬಾದ್‌ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳಲ್ಲದೆ, 185 ಮಂದಿ ರೈತರು ಕಣದಲ್ಲಿದ್ದರು. ಕೆಂಪು ಜೋಳಕ್ಕೆ ತೆಲಂಗಾಣ ಸರ್ಕಾರ ಸೂಕ್ತ ರೀತಿಯ ಬೆಲೆ ನೀಡಲಿಲ್ಲ ಎಂದು ಆರೋಪಿಸಿ ರೈತರು ಸ್ಪರ್ಧೆ ಮಾಡಿದ್ದರು. ಈ ಕ್ಷೇತ್ರದಿಂದ ಸ್ಪರ್ಧೆ ಮಾಡಿದ ಪ್ರಮುಖರಲ್ಲಿ ಸಿಎಂ ಪುತ್ರಿ ಕೆ.ಕವಿತಾ ಪ್ರಮುಖರಾಗಿದ್ದಾರೆ. ಅವರು ಬಿಜೆಪಿಯ ಧರ್ಮಪುರಿ ಅರವಿಂದ ವಿರುದ್ಧ ಸೋಲು ಅನುಭವಿಸಿದ್ದಾರೆ.

ಹಿನ್ನಡೆಗೆ ಕಾರಣ
ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಟಿಆರ್‌ಎಸ್‌ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್‌ ರಾಷ್ಟ್ರ ರಾಜಕಾರಣದಲ್ಲಿ ಮಿಂಚುವ ಆಸೆ ಹೊಂದಿದರು. ಫೆಡರಲ್‌ ಫ್ರಂಟ್‌ ರಚನೆ ಹುಮ್ಮಸ್ಸಿನಲ್ಲಿದ್ದ ಅವರು ಪ್ರಚಾರದತ್ತ ಹೆಚ್ಚಿನ ಗಮನ ಕೊಡಲಿಲ್ಲ. ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರ ಬಿರುಸಿನ ಪ್ರಚಾರದ ಮುಂದೆ ಇತರ ಪಕ್ಷಗಳು ಮಂಕಾದವು.

ದಕ್ಷಿಣದಲ್ಲಿ ಬಿಜೆಪಿ ಸಾಧನೆ ಮಾಡುತ್ತಿದೆ ಎನ್ನುವುದಕ್ಕೆ ತೆಲಂಗಾಣದಲ್ಲಿನ ಪಕ್ಷದ ಸಾಧನೆ ಗಮನಾರ್ಹ. ಪಕ್ಷದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಮುರಳೀಧರ ರಾವ್‌, ಬಿಜೆಪಿ ನಾಯಕ


ಗೆದ್ದ ಪ್ರಮುಖರು

ಉತ್ತಮ ರೆಡ್ಡಿ, ನಲಗೊಂಡಾ
ಕೋಮಟಿ ರೆಡ್ಡಿ ವೆಂಕಟ ರೆಡ್ಡಿ, ಬೋಂಗಿರ್‌
ಸೋಯಂ ಬಾಪುರಾವ್‌, ಅಡಿಲಾಬಾದ್‌
ಅಸಾದುದ್ದೀನ್‌ ಒವೈಸಿ, ಹೈದರಾಬಾದ್‌
ಬಂಡಿ ಸಂಜಯ ಕುಮಾರ್‌, ಕರೀಂನಗರ

ಸೋತ ಪ್ರಮುಖರು
ಕೆ.ಕವಿತಾ, ನಿಜಾಮಾಬಾದ್‌
ಅನಿಲ್‌ ಕುಮಾರ್‌ ಗಾಲಿ, ಮೇದಕ್‌
ಆಗಂ ಚಂದ್ರಶೇಖರ್‌, ಪೆದ್ದಂಪಲ್ಲಿ
ದೊಮ್ಮಟಿ ಸಂಭಯ್ಯ, ವರಂಗಲ್‌
ಡಾ.ಮಲ್ಲು ರವಿ, ನಗರಕರ್ನೂಲು

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.