ಟ್ರಂಪ್ ಗೆ ಕೋವಿಡ್ : ದೇವರಂತೆ ಆರಾಧಿಸುತ್ತಿದ್ದ ತೆಲಂಗಾಣದ ಅಭಿಮಾನಿ ಹೃದಯಾಘಾತದಿಂದ ಸಾವು
Team Udayavani, Oct 11, 2020, 10:01 PM IST
ನವದೆಹಲಿ : ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ದೇವರಂತೆ ಪೂಜಿಸುತ್ತಿದ್ದ ತೆಲಂಗಾಣ ಮೂಲದ ವ್ಯಕ್ತಿಯೊಬ್ಬರು ಟ್ರಂಪ್ ಕೋವಿಡ್ ವಿಷಯ ತಿಳಿದು ಆಘಾತದಿಂದ ಹೃದಯಘಾತವಾಗಿ ಮೃತಪಟ್ಟ ಘಟನೆ ತೆಲಂಗಾಣದ ಮೇಡಕ್ ಜಿಲ್ಲೆಯ ತೂಪ್ರನ್ ಪ್ರದೇಶದಲ್ಲಿ ನಡೆದಿದೆ.
ಸ್ನೇಹ ವಲಯ ಹೇಳುವ ಪ್ರಕಾರ ಮೃತ ಬುಸ್ಸಾ ಕೃಷ್ಣ ಡೊನಾಲ್ಟ್ ಟ್ರಂಪ್ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಟ್ರಂಪ್ ರನ್ನು ದೇವರಂತೆ ಆರಾಧಿಸಿ ಪೂಜೆ ಸಲ್ಲಿಸುತ್ತಿದ್ದರು.ಟ್ರಂಪ್ ರನ್ನು ಆರಾಧಿಸಲು ಕೃಷ್ಣ ಕಳೆದ ವರ್ಷ ತೆಲಂಗಾಣದ ಜನಗಾಂವ್ ಜಿಲ್ಲೆಯ ಬಚನ್ನಪೇಟೆ ಬ್ಲಾಕ್ನಲ್ಲಿರುವ ಕೊನ್ನೆ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ 6 ಅಡಿ ಎತ್ತರದ ಟ್ರಂಪ್ ರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸುವುದು ಮಾತ್ರವಲ್ಲದೆ ಪ್ರತಿ ಶುಕ್ರವಾರ ಟ್ರಂಪ್ ಅವರ ದೀರ್ಘಾ ಆಯಷ್ಯಕ್ಕಾಗಿ ಉಪವಾಸ ಇರುತ್ತಿದ್ದರು..
ಕೃಷ್ಣ ಟ್ರಂಪ್ ಅವರ ಭಾವಚಿತ್ರವನ್ನು ಕುತ್ತಿಗೆಯಲ್ಲಿ ಹಾಕಿರುತ್ತಿದ್ದರು. ಎಲ್ಲಿ ಹೋದರು ಟ್ರಂಪ್ ಅವರ ಚಿತ್ರವನ್ನು ತೆಗೆದುಕೊಂಡು ಹೋಗುತ್ತಿದ್ದರಂತೆ. ಕೃಷ್ಣ ಅವರ ಕುಟುಂಬದವರು ಹೇಳುವ ಪ್ರಕಾರ ಡೊನಾಲ್ಟ್ ಟ್ರಂಪ್ ಕೋವಿಡ್ ಸೋಂಕು ಪತ್ತೆಯಾದ ದಿನದಿಂದ ಕೃಷ್ಣ ಸರಿಯಾಗಿ ಊಟ ,ನೀರು ಸೇವಿಸದೆ ಟ್ರಂಪ್ ಗುಣಮುಖಕ್ಕೆ ಪ್ರಾರ್ಥನೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.
ಟ್ರಂಪ್ ಕೋವಿಡ್ ಸೋಂಕಿನ ವಿಷಯ ತಿಳಿದು ದುಃಖದಿಂದ ಇದ್ದ 38 ವರ್ಷದ ಕೃಷ್ಣ ಸಂಬಂಧಿಕರ ಮನೆಯಲ್ಲಿ ಚಹಾ ಕುಡಿಯುವ ವೇಳೆಯಲ್ಲಿ ಕುಸಿದು ಬಿದ್ದಿದ್ದಾರೆ.ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಆದಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಟ್ರಂಪ್ ಭಾರತ ಭೇಟಿಯ ವೇಳೆಗೆ ಕೇಂದ್ರ ಸರ್ಕಾರಕ್ಕೆ ಅವರೊಂದಿಗೆ ಸಭೆಯನ್ನು ಏರ್ಪಡಿಸಲು ಮನವಿಯನ್ನು ಕೃಷ್ಣ ಮಾಡಿಕೊಂಡಿದ್ದರು. ಗ್ರಾಮದಲ್ಲಿ ಅವರನ್ನು ಟ್ರಂಪ್ ಕೃಷ್ಣ ಎಂದು ಕರೆಯಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ