ಜಾಗ ಸಮತಟ್ಟುಗೊಳಿಸುತ್ತಿದ್ದ ವೇಳೆ ನಿಧಿ ಪತ್ತೆ, ಪುರಾತನ ಚಿನ್ನಾಭರಣ ಜಿಲ್ಲಾಧಿಕಾರಿ ವಶಕ್ಕೆ

ವಾರಂಗಲ್ ನಗರದ ಖಜಾನೆಯಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಭಾಸ್ಕರ್ ತಿಳಿಸಿದ್ದಾರೆ.

Team Udayavani, Apr 9, 2021, 2:40 PM IST

ಜಾಗ ಸಮತಟ್ಟುಗೊಳಿಸುತ್ತಿದ್ದ ವೇಳೆ ನಿಧಿ ಪತ್ತೆ, ಪುರಾತನ ಚಿನ್ನಾಭರಣ ಜಿಲ್ಲಾಧಿಕಾರಿ ವಶಕ್ಕೆ

ಹೈದರಬಾದ್: ಜಾಗವನ್ನು ಅಗೆಯುವ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣ ಇದ್ದ ಪುರಾತನ ಕಾಲದ ನಿಧಿ ಪತ್ತೆಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇದು ದೇವರ ಮೂರ್ತಿಗೆ ಅಲಂಕರಿಸಲು ಬಳಸುವ ಆಭರಣವಾಗಿದೆ ಎಂದು ವರದಿ ತಿಳಿಸಿದೆ.

ವಾರಂಗಲ್-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಜನ್ಗಾಂವ್ ಜಿಲ್ಲೆಯ ಪೆಂಬರ್ಥಿ ಗ್ರಾಮದಲ್ಲಿ ತನ್ನ 11 ಎಕರೆ ಜಾಗವನ್ನು ಸಮತಟ್ಟುಗೊಳಿಸುವ ಸಂದರ್ಭದಲ್ಲಿ ತಾಮ್ರದ ಮಡಕೆ ದೊರಕಿರುವುದಾಗಿ ವರದಿ ವಿವರಿಸಿದೆ.

ಜೆಸಿಬಿ ಮೂಲಕ ಜಾಗವನ್ನು ಸಮತಟ್ಟುಗೊಳಿಸುತ್ತಿದ್ದಾಗ ಚಿನ್ನ ಮತ್ತು ಬೆಳ್ಳಿ ಆಭರಣಗಳಿದ್ದ ಮಡಕೆ ಪತ್ತೆಯಾಗಿತ್ತು. ತಾಮ್ರದ ಮಡಕೆಯಲ್ಲಿ 1.727 ಕೆಜಿ ಬೆಳ್ಳಿ ಆಭರಣ ಹಾಗೂ 187.45 ಗ್ರಾಮ್ಸ್ ಚಿನ್ನದ ಆಭರಣ ಇದ್ದಿರುವುದಾಗಿ ವರದಿ ತಿಳಿಸಿದೆ.

ಚಿನ್ನದ ನಿಧಿ ಸಿಕ್ಕಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಗ್ರಾಮಸ್ಥರು ಸೇರತೊಡಗಿದ್ದು, ನಿಧಿ ದೊರೆತ ಸ್ಥಳದಲ್ಲಿ ಸಂಪ್ರದಾಯದ ಪ್ರಕಾರ ತೆಂಗಿನ ಕಾಯಿ ಒಡೆದು, ಊದುಬತ್ತಿ ಹಚ್ಚಿ, ಹೂ ಹಾಕಿ ಪೂಜೆ ಸಲ್ಲಿಸಿದ್ದರು. ಈ ಹಿಂದೆ ಇಲ್ಲಿರುವ ದೇವಾಲಯದ ದೇವರ ಆಭರಣ ಇದಾಗಿತ್ತು ಎಂಬ ನಂಬಿಕೆ ಸ್ಥಳೀಯರದ್ದು ಎಂದು ವರದಿ ತಿಳಿಸಿದೆ.

ಜಾಗದ ಮಾಲೀಕ ನರಸಿಂಹಲು ಅವರು ಪುರಾತನ ಚಿನ್ನಾಭರಣ ತನ್ನ ಬಳಿ ಇಟ್ಟುಕೊಳ್ಳದೆ, ನಿಧಿ ದೊರೆತ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದರು. ಭಾರತೀಯ ಗುಪ್ತ ನಿಧಿ ಕಾಯ್ದೆ 1878 ಪ್ರಕಾರ, ಈ ಪುರಾತನ ಆಭರಣಗಳನ್ನು ವಾರಂಗಲ್ ನಗರದ ಖಜಾನೆಯಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಭಾಸ್ಕರ್ ತಿಳಿಸಿದ್ದಾರೆ.

ಈ ಪುರಾತನ ಆಭರಣ ಮತ್ತು ಸ್ಥಳದ ಬಗ್ಗೆ ಪುರಾತತ್ವ ಇಲಾಖೆಯ ತಜ್ಞರು ಅಧ್ಯಯನ ನಡೆಸುವ ಮೂಲಕ ಇದು ಎಷ್ಟು ವರ್ಷ ಹಳೆಯ ಚಿನ್ನಾಭರಣ ಎಂಬುದನ್ನು ಪತ್ತೆ ಹಚ್ಚಲಿದ್ದಾರೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.