ತಂದೆ ಎದುರೇ ಅಪಹರಣ: ಅಪಹರಣ ಮಾಡಿದವನೇ ನನ್ನ ಗಂಡ ಎಂದ ಯುವತಿ.!
Team Udayavani, Dec 21, 2022, 8:52 AM IST
ತೆಲಂಗಾಣ: ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 18 ವರ್ಷದ ಯುವತಿಯನ್ನು ತಂದೆಯೇ ಎದುರೇ ಕಾರಿನಲ್ಲಿ ಬಂದ ನಾಲ್ವರ ತಂಡವೊಂದು ಅಪಹರಿಸಿಕೊಂಡು ಹೋಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಅಪಹರಣದ ಬಳಿಕ ಯುವತಿ ಶಾಲಿನಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ತಾನು ಅಪಹರಣ ಮಾಡಿರುವ ವ್ಯಕ್ತಿಯನ್ನು ಕಳೆದ ಒಂದು ವರ್ಷದ ಹಿಂದೆಯೇ ಮದುವೆಯಾಗಿದ್ದೇನೆ. ನಾನು ವಯಸ್ಕಳಾದಳೂ ನನ್ನ ಪೋಷಕರು ನಮ್ಮ ಸಂಬಂಧವನ್ನು ಒಪ್ಪಿಕೊಳ್ಳಲಿಲ್ಲ. ನನ್ನ ಗಂಡನ ವಿರುದ್ಧವೇ ದೂರು ದಾಖಲು ಮಾಡಿದ್ದರು. ನಾವು ಮದುವೆಯಾಗಿದ್ದೇವೆ ಆದರೆ ನನ್ನ ಗಂಡ ದಲಿತ ಎನ್ನುವ ಕಾರಣಕ್ಕೆ ಅವರೂ ಈಗಲೂ ನಮ್ಮ ಸಂಬಂಧವನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಯುವತಿ ಹೇಳಿದ್ದಾಳೆ.
ಘಟನೆ ಹಿನ್ನೆಲೆ: ಜಿಲ್ಲೆಯ ಚಂದೂರ್ತಿ ಮಂಡಲದ ಮೂಡೆಪಲ್ಲಿ ಗ್ರಾಮದಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯ ಜೊತೆ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ವರ ತಂಡ ತಂದೆಗೆ ಹಲ್ಲೆ ನಡೆಸಿ ಯುವತಿಯನ್ನು ಅಪಹರಿಸಿಕೊಂಡು ಹೋಗಿದ್ದರು.
ಯುವತಿಯ ತಂದೆಯನ್ನು ಥಳಿಸಿ ಮಗಳನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸೋಮವಾರವಷ್ಟೇ ಯುವತಿಗೆ ಬೇರೊಬ್ಬ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ಇದೇ ಕಾರಣಕ್ಕೆ ಯುವಕ ಮತ್ತು ಆತನ ಸ್ನೇಹಿತರು ಯುವತಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯ ಪೊಲೀಸರು ಯುವತಿಯ ಹಾಗೂ ಅಪಹರಣಕಾರರ ಪತ್ತೆಗೆ ವಿಶೇಷ ತಂಡ ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್
ಛತ್ತೀಸ್ಗಢದ ಕಂಕೇರ್ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ
Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು
Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್ ಮುಳುಗಡೆ; ಹಲವರು ನಾಪತ್ತೆ
Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ನಾರಾಯಣ್,ಬಟ್ಲರ್ ಶತಕ ಮೇಲಾಟ; ರನ್ ಚೇಸ್ನಲ್ಲಿ ರಾಜಸ್ಥಾನ್ ರಾಯಲ್ಸ್ಗೆ ಬೃಹತ್ ಗೆಲುವು
ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್ ಸ್ಲೇಟರ್
FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್
ಹೃದಯ ಗೆದ್ದ ದಿನೇಶ್ ಕಾರ್ತಿಕ್; ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ?
IPL ಬ್ರೇಕ್ ಪಡೆದ ಗ್ಲೆನ್ ಮ್ಯಾಕ್ಸ್ವೆಲ್