ಮೌನ ಮುರಿದ ಕೆಸಿಆರ್: ಪಶುವೈದ್ಯೆ ಅತ್ಯಾಚಾರ,ಕೊಲೆ ಪ್ರಕರಣ ತ್ವರಿತ ವಿಚಾರಣೆಗೆ ಆದೇಶ
Team Udayavani, Dec 2, 2019, 8:50 AM IST
ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಇಡೀ ದೇಶವನ್ನು ತಲ್ಲಣ ಗೊಳಿಸಿದ್ದು ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದರೂ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡದೇ ಟೀಕೆಗಳಿಗೆ ಗುರಿಯಾಗಿದ್ದ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರು ಕೊನೆಗೂ ತಮ್ಮ ಮೌನ ಮುರಿದಿದ್ದು, ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಆದೇಶಿಸಿದ್ದಾರೆ. ಮಾತ್ರವಲ್ಲದೆ ಸಂತ್ರಸ್ಥೆಯ ಪೋಷಕರಿಗೆ ತೆಲಂಗಾಣ ಸರ್ಕಾರ ಅಗತ್ಯ ನೆರವು ನೀಡಲು ಸಿದ್ಧವಾಗಿದೆ ಎಂದಿದ್ದಾರೆ.
ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣವನ್ನು ಭೀಕರ ಮತ್ತು ಅತ್ಯಂತ ನೀಚ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾರ್ಯ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ. ಅತ್ಯಾಚಾರ, ಕೊಲೆ ಮಾಡುವಂತಹ ವ್ಯಕ್ತಿಗಳು ನಮ್ಮ ನಡುವೆ ವಾಸಿಸುತ್ತಿರುವುದು ಬೇಸರ ತಂದಿದೆ ಎಂದಿದ್ದಾರೆ.
ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸುವಂತೆ ಆದೇಶಿಸಿದ್ದು, ಇದಕ್ಕಾಗಿ ವಿಶೇಷ ತುರ್ತು ಮತ್ತು ತ್ವರಿತ ವಿಚಾರಣಾ ನ್ಯಾಯಪೀಠ ರಚನೆ ಮಾಡಲು ಆದೇಶ ನೀಡಿದ್ದಾರೆ. ಅಲ್ಲದೆ ಸಂತ್ರಸ್ಥೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ಅವರು, ಕಾನೂನಾತ್ಮಕವಾಗಿ ಮಾತ್ರವಲ್ಲದೇ ಕುಟುಂಬಕ್ಕೆ ನೈತಿಕ ಸ್ಛೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಲಿದೆ. ಕುಟುಂಬಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ನೆರವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ