ಏಪ್ರಿಲ್ 7ರೊಳಗೆ ತೆಲಂಗಾಣ Covid-19 ವೈರಸ್ ಮುಕ್ತ ರಾಜ್ಯವಾಗಲಿದೆ: CM ಚಂದ್ರಶೇಖರ್ ವಿಶ್ವಾಸ
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ 70 ಕೋವಿಡ್ 19 ಸೋಂಕು ಪೀಡಿತರಿದ್ದಾರೆ.
Team Udayavani, Mar 30, 2020, 10:21 AM IST
ತೆಲಂಗಾಣ: ತೆಲಂಗಾಣ ರಾಜ್ಯ ಮಾರಣಾಂತಿಕ ಕೋವಿಡ್ 19 ಮಹಾಮಾರಿ ಸೋಂಕಿನಿಂದ ಏಪ್ರಿಲ್ 7ರೊಳಗೆ ಮುಕ್ತವಾಗಲಿದೆ ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ 70 ಕೋವಿಡ್ 19 ಸೋಂಕು ಪೀಡಿತರಿದ್ದಾರೆ. ಹನ್ನೊಂದು ಮಂದಿ ಚೇತರಿಸಿಕೊಂಡಿದ್ದು, ನೆಗೆಟೀವ್ ವರದಿ ಬಂದಿದೆ. ಇವರನ್ನೆಲ್ಲಾ ಸೋಮವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲಾ ರೀತಿಯ ವೈದ್ಯಕೀಯ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಎಲ್ಲಾ ಔಪಚಾರಿಕ ಕಾರ್ಯದ ನಂತರ ರೋಗಿಗಳನ್ನು ಡಿಸ್ ಚಾರ್ಜ್ ಮಾಡಲಾಗುವುದು. 58 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶದಿಂದ ರಾಜ್ಯಕ್ಕೆ ಮರಳಿದ 25,937 ಮಂದಿ ಸರ್ಕಾರದ ನಿಗಾದಲ್ಲಿದ್ದಾರೆ. ಅವರ ಕ್ವಾರಂಟೈನ್ ಸಮಯ ಏಪ್ರಿಲ್ 7ರಂದು ಮುಕ್ತಾಯವಾಗಲಿದೆ ಎಂದು ಹೇಳಿರುವುದಾಗಿ ಎಎನ್ ಐ ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ 21 ದಿನಗಳ ಲಾಕ್ ಡೌನ್ ಬಗ್ಗೆ ಒತ್ತಡಕ್ಕೊಳಗಾಗದೆ ಸ್ವಯಂ ನಿಯಂತ್ರಣದಲ್ಲಿರುವುದು ಮುಖ್ಯ ಎಂದು ತಿಳಿಸಿದ್ದು, ಏಪ್ರಿಲ್ 7ರ ನಂತರ ಒಂದು ವೇಳೆ ಹೊಸ ಪ್ರಕರಣಗಳು ಪತ್ತೆಯಾಗದಿದ್ದರೆ ರಾಜ್ಯ ಕೋವಿಡ್ 19 ವೈರಸ್ ಮುಕ್ತವಾಗಲಿದೆ ಎಂದು ಹೇಳಿದರು.
ಎಲ್ಲಾ ಆಹಾರ ಧಾನ್ಯಗಳನ್ನು ಗ್ರಾಮಗಳಿಂದ ಖರೀದಿಸಲಾಗುವುದು. ಕೂಪನ್ ದಿನಾಂಕ ಪ್ರಕಾರದ ಬೆಳೆಯನ್ನು ಖರೀದಿಸಲಾಗುವುದು. ಒಂದು ವೇಳೆ ಈ ಶಿಸ್ತನ್ನು ಪಾಲಿಸಿದರೆ ನಾವು ಕೋವಿಡ್ 19 ವೈರಸ್ ಹರಡುವುದನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.
ರೈತರು ತಮ್ಮ ಬೆಳೆಯನ್ನು ಮಾರಾಟ ಮಾಡಲು ಬಂದಾಗ ಅವರು ತಮ್ಮ ಪಾಸ್ ಬುಕ್ ಅನ್ನು ಪಡೆಯಬಹುದಾಗಿದೆ. ಹಣವನ್ನು ಆನ್ ಲೈನ್ ಮೂಲಕ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ