ಅಯೋಧ್ಯೆಯಲ್ಲಿ ತಾತ್ಕಾಲಿಕ ದೇಗುಲ : 25ರಂದು ಲೋಕಾರ್ಪಣೆ
Team Udayavani, Mar 16, 2020, 7:15 AM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿ ಶ್ರೀರಾಮನ ಪೂಜೆಗಾಗಿ ಹೊಸ ಪುಟ್ಟ ದೇಗುಲ ವೊಂದನ್ನು ನಿರ್ಮಿಸಲಾಗಿದೆ. ಸದ್ಯದಲ್ಲೇ ಇಲ್ಲಿ ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಆರಂಭಿಸ ಲಾಗುತ್ತದೆ. ಮಾ.25ರಂದು ಮೂರ್ತಿಗೆ ಮೊದಲ ಪೂಜೆ ಸಲ್ಲಿಸುವ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೇಗುಲದ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದಾರೆ.
ಗುಂಡು ನಿರೋಧಕ ದೇಗುಲ!
ಈ ಪುಟ್ಟ ದೇಗುಲವನ್ನು ಹೊಸದಿಲ್ಲಿಯಲ್ಲಿ ನಿರ್ಮಿಸಿ ಅಯೋಧ್ಯೆಗೆ ತರಲಾಗಿದೆ! ಇದನ್ನು ಬುಲೆಟ್ ಪ್ರೂಫ್ ಫೈಬರ್ ಸಾಮಗ್ರಿಯಿಂದ ನಿರ್ಮಿಸಲಾಗಿದೆ. ಇದು ಅಗ್ನಿ ಮತ್ತು ಜಲ ನಿರೋಧಕವೂ ಆಗಿದೆ. ಹವಾನಿಯಂತ್ರಿತ ವ್ಯವಸ್ಥೆಯೂ ಇಲ್ಲಿದೆ ಎನ್ನಲಾಲಾಗಿದೆ.
27 ವರ್ಷಗಳ ಅನಂತರ ಪೂಜೆ
ದಶಕಗಳ ಹಿಂದೆ ವಿವಾದಿತ ಬಾಬರಿ ಕಟ್ಟಡದಲ್ಲಿದ್ದ ರಾಮಲಲ್ಲಾ ವಿಗ್ರಹವನ್ನು 1992ರಲ್ಲಿ ನಡೆದಿದ್ದ ಗಲಭೆಯ ಹಿನ್ನೆಲೆಯಲ್ಲಿ ಹತ್ತಿರದಲ್ಲೇ ಇದ್ದ ತಾತ್ಕಾಲಿಕ ಟೆಂಟ್ನಲ್ಲಿ ಇರಿಸಿ ಪೂಜಿಸಲಾಗುತ್ತಿತ್ತು. ಅದಾಗಿ, 27 ವರ್ಷಗಳ ಅನಂತರ ಈಗ ಆ ಮೂರ್ತಿಗೆ ದೇಗುಲದಲ್ಲಿ ಪೂಜೆಗೊಳ್ಳುವ ಅವಕಾಶ ಸಿಗಲಿದೆ.
ರಾಮನವಮಿ ಮೇಳಕ್ಕೆ ವೈರಸ್ ಭೀತಿ
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ, ಸಾವಿರಾರು ವರ್ಷಗಳಿಂದ ಅಯೋಧ್ಯೆಯಲ್ಲಿ ನಡೆಸಿಕೊಂಡು ಬರಲಾಗುತ್ತಿರುವ ರಾಮನವಮಿ ಮೇಳ ಈ ಬಾರಿ ರದ್ದಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ