ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕನ್ನಡಿಗ ಯೋಧ ಹುತಾತ್ಮ
Team Udayavani, May 26, 2019, 2:38 PM IST
ಹಾವೇರಿ: ಪುಲ್ವಮಾದಲ್ಲಿ ನಡೆದಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡು ದೆಹಲಿಯ ಆರ್.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಶಿವಲಿಂಗೇಶ್ವರಪಾಟೀಲ್ (26) ಶನಿವಾರ ಹುತಾತ್ಮರಾಗಿದ್ದಾರೆ.
ಕಳೆದ 6 ವರ್ಷಗಳ ಹಿಂದೆ ಶಿವಲಿಂಗಪ್ಪ ಅವರು ಸೇನೆಗೆ ಸೇರ್ಪಡೆಯಾಗಿದ್ದರು.
ನಾಳೆ ಸೋಮವಾರ ಶಿವಲಿಂಗಪ್ಪ ಅವರಪಾರ್ಥೀವಶರೀರ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮಕ್ಕೆ ಆಗಮಿಸಲಿದ್ದು,ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಕ್ರಿಯೆ ನಡೆಯಲಿದೆ.