ಉಗ್ರ ಹಣ: ದಕ್ಷಿಣ ಕಾಶ್ಮೀರದ 11 ಕಡೆಗಳಲ್ಲಿ ಎನ್ಐಎ ಶೋಧ ಕಾರ್ಯಾಚರಣೆ
Team Udayavani, Feb 27, 2019, 10:35 AM IST
ಹೊಸದಿಲ್ಲಿ : ಕಳೆದ ಫೆ.14ರಂದು ನಡೆದಿದ್ದ ಪುಲ್ವಾಮಾ ಉಗ್ರ ದಾಳಿಯನ್ನು ಅನುಸರಿಸಿ ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ಆರಂಭಿಸಿದ್ದ ಉಗ್ರ ಹಣ ಪೂರೈಕೆ ಮಾರ್ಗಗಳ ಶೋಧ ಕಾರ್ಯವನ್ನು ಮುಂದುವರಿಸಿದ್ದು ಇಂದು ಬುಧವಾರ ಅದು ದಕ್ಷಿಣ ಕಾಶ್ಮೀರದ ಸುಮಾರು 11 ಸ್ಥಳಗಳಲ್ಲಿ ಶೋಧ ಕಾರ್ಯ ಕೈಗೊಂಡಿತು.
ಈಚಿನ ಪುಲ್ವಾಮಾ ಉಗ್ರ ದಾಳಿ ಮುಖ್ಯ ಆರೋಪಿಗಳೆಂದು ಗುರುತಿಸಲ್ಪಟ್ಟಿರುವ ಮತ್ತು ಜೈಶ್ ಎ ಮೊಹಮ್ಮದ್ ಸಕ್ರಿಯ ಉಗ್ರರಾಗಿರುವ ಮುದಸ್ಸಿರ್ ಅಹ್ಮದ್ ಖಾನ್ ಮತ್ತು ಸಜ್ಜದ್ ಭಟ್ ಅವರ ಮನೆಗಳ ಮೇಲೆ ಎನ್ಐಎ ದಾಳಿ ನಡೆಸಿತು.
ದಕ್ಷಿಣ ಕಾಶ್ಮೀರದ ತ್ರಾಲ್, ಆವಂತಿಪೋರಾ ಮತ್ತು ಪುಲ್ವಾಮಾ ಪ್ರದೇಶಗಳಲ್ಲಿ ಜೆಇಎಂ ಪರ ಕೆಲಸ ಮಾಡುತ್ತಿದ್ದ ಹಲವು ಶಂಕಿತರ ಮನೆಗಳ ಮೇಲೂ ಎನ್ಐಎ ಇಂದು ದಾಳಿ ನಡೆಸಿತು. ಈ ಸಂದರ್ಭದಲ್ಲಿ ಸಂಕೇತ ಬರಹಗಳನ್ನು ಒಳಗೊಂಡ ಡೈರಿಗಳನ್ನು ಮತ್ತು ಹಲವು ಅಪರಾಧಿಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಎನ್ಐಎ ಹೇಳಿದೆ.
ದಕ್ಷಿಣ ಕಾಶ್ಮೀರದ ಮೂವರು ಮುಖ್ಯ ಪ್ರತ್ಯೇಕತಾವಾದಿ ನಾಯಕರಾದ ಮೊಹಮ್ಮದ್ ಶಬಾನ್ ದಾರ್, ಶವ್ಕತ್ ಮೌಲವಿ ಮತ್ತು ಯಾಸ್ಮಿನ್ ರಜಾ ಅವರ ಮನೆಗಳ ಮೇಲೂ ದಾಳಿ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ