ದೆಹಲಿ, ಅಸ್ಸಾಂನಲ್ಲಿ ಭಯೋತ್ಪಾದಕ ದಾಳಿ ಸಂಚು ವಿಫಲ; ಐಇಡಿ ಜತೆ ಮೂವರು ಉಗ್ರರ ಬಂಧನ
Team Udayavani, Nov 25, 2019, 5:43 PM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆಯಿಂದಾಗಿ ಸುಧಾರಿತ ಸ್ಫೋಟಕ ವಸ್ತು(ಐಇಡಿ)ವಿನ ಜತೆಗೆ ಮೂವರು ಉಗ್ರರನ್ನು ಅಸ್ಸಾಂನಲ್ಲಿ ಬಂಧಿಸುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಿದಂತಾಗಿದೆ ಎಂದು ವರದಿ ತಿಳಿಸಿದೆ.
ಬಂಧಿತರ ಬಳಿ ಇದ್ದ ನಿಷೇಧಿತ ಸಾಹಿತ್ಯ ಹಾಗೂ ಇನ್ನಿತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಐಸಿಸ್ ನಿಂದ ಪ್ರಭಾವಿರಾಗಿದ್ದು, ಅಸ್ಸಾಂನ ರಾಮ್ ಮೇಳದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಅಸ್ಸಾಂ ನಂತರ ದೆಹಲಿಯಲ್ಲಿ ದಾಳಿ ನಡೆಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದ್ದಾರೆಂದು ವರದಿ ವಿವರಿಸಿದೆ.
ಈ ಘಟನೆಯನ್ನು ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ನ ಡಿಸಿಪಿ ಪ್ರಮೋದ್ ಕುಶ್ವಾಹಾ ಅವರು ಖಚಿತಪಡಿಸಿದ್ದು, ಐಇಡಿ ಸ್ಫೋಟಕದ ಜತೆ ಮೂವರು ಉಗ್ರರನ್ನು ಬಂಧಿಸಿದ್ದರಿಂದ ಉಗ್ರರ ದಾಳಿ ಸಂಚನ್ನು ವಿಫಲಗೊಳಿಸಿದಂತಾಗಿದೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.
ಅಸ್ಸಾಂನ ಗೋಲಾಪಾರಾ ನಿವಾಸಿಗಳಾದ ರಂಜಿತ್ ಅಲಿ, ಇಸ್ಲಾಂ ಹಾಗೂ ಜಮಾಲ್ ಸೇರಿ ಮೂವರನ್ನು ಬಂಧಿಸಲಾಗಿದೆ. ಮೂವರು ದೆಹಲಿಯಲ್ಲಿ ಕೆಲವರ ಜತೆ ಸಂಪರ್ಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಂಪರ್ಕ ಹೊಂದಿರುವ ಬಗ್ಗೆ ತನಿಖೆಯನ್ನು ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ