ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ
Team Udayavani, Oct 28, 2021, 8:52 AM IST
ಶ್ರೀನಗರ: ಬಾರಾಮುಲ್ಲಾದ ಚೆರ್ದಾರಿಯಲ್ಲಿ ಗುರುವಾರ ಬೆಳಗ್ಗೆ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಏರಿಯಾ ಡಾಮಿನೇಷನ್ ಪ್ಯಾಟ್ರೋಲ್ (ಎಡಿಪಿ) ಮೇಲೆ ಭಯೋತ್ಪಾದಕರ ಗುಂಪು ಗುಂಡಿನ ದಾಳಿ ನಡೆಸಿದ್ದು, ಭೀಕರ ಗುಂಡಿನ ಚಕಮಕಿ ನಡೆದಿದೆ.
ಘಟನೆಯಲ್ಲಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಿದೆ. ಹತ್ಯೆಗೀಡಾದ ಭಯೋತ್ಪಾದಕನಿಂದ ಪಿಸ್ತೂಲ್, ಲೋಡ್ ಮಾಡಲಾದ ಮ್ಯಾಗಜೀನ್ ಮತ್ತು ಪಾಕಿಸ್ತಾನ ನಿರ್ಮಿತ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವುದಾಗಿ ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾತನಾಡಿ, “ಹತ್ಯೆಗೊಳಗಾದ ಭಯೋತ್ಪಾದಕನನ್ನು ಕುಲ್ಗಾಮ್ ಜಿಲ್ಲೆಯ ಜಾವೇದ್ ಅಹ್ ವಾನಿ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ವಾನ್ಪೋಹ್ನಲ್ಲಿ ಬಿಹಾರದ 2 ಕಾರ್ಮಿಕರ ಹತ್ಯೆಯಲ್ಲಿ ಭಯೋತ್ಪಾದಕ ಗುಲ್ಜಾರ್ ಗೆ ಈತ ಸಹಾಯ ಮಾಡಿದ್ದ” ಎಂದಿದ್ದಾರೆ.
ಇದನ್ನೂ ಓದಿ:ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್