ಮುಂದುವರಿದ ಬೇಟೆ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಎನ್ ಕೌಂಟರ್ ಗೆ ಉಗ್ರ ಬಲಿ
ಪ್ರತಿಯಾಗಿ ನಡೆಸಿದ ದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
Team Udayavani, Aug 19, 2020, 5:51 PM IST
ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತ್ಯೆಗೀಡಾಗಿರುವ ಘಟನೆ ಬುಧವಾರ (ಆಗಸ್ಟ್ 19, 2020) ನಡೆದಿದೆ ಎಂದು ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರದ ಶೋಪಿಯಾನದ ಮೋಲು ಚಿತ್ರಾಗಾಮ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಅಪರಿಚಿತ ಉಗ್ರ ಸಾವನ್ನಪ್ಪಿದ್ದಾನೆ. ಈ ಪ್ರದೇಶದಲ್ಲಿ ಮೂವರು ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳು ಹೇಳಿವೆ.
ಕಾರ್ಯಾಚರಣೆಯಲ್ಲಿ ಜಮ್ಮು-ಕಾಶ್ಮೀರ ಪೊಲೀಸ್, 44ನೇ ರಾಷ್ಟ್ರೀಯ ರೈಫಲ್ಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ಪಾಲ್ಗೊಂಡಿರುವುದಾಗಿ ತಿಳಿಸಿದೆ. ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ನಡೆಸಿದ ದಾಳಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಕಳೆದ ಕೆಲವು ದಿನಗಳಿಂದ ಜಮ್ಮು-ಕಾಶ್ಮೀರದ ವಿವಿಧ ಪ್ರದೇಶದಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸುವ ಮೂಲಕ ಹಲವು ಉಗ್ರರನ್ನು ಹೊಡೆದುರುಳಿಸಿದೆ. ಇತ್ತೀಚೆಗಷ್ಟೇ ಸೇನಾ ಪೋಸ್ಟ್ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದರು. ಈ ಘಟನೆ ನಂತರ ಭದ್ರತಾ ಪಡೆ ಉಗ್ರರ ಅಡಗುತಾಣದ ಮಾಹಿತಿ ಕಲೆ ಹಾಕಿ ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್