ಬೈಕ್ ಮೂಲಕ ಇನ್ನೊಂದು ಆತ್ಮಾಹುತಿ ದಾಳಿಗೆ ಉಗ್ರರ ಪ್ಲ್ಯಾನ್?
ಗುಪ್ತಚರ ಮೂಲಗಳಿಂದ ಬಯಲಾಯ್ತ ಆತಂಕಕಾರಿ ಮಾಹಿತಿ
Team Udayavani, Apr 14, 2019, 1:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ಶ್ರೀನಗರ: ಪುಲ್ವಾಮ ಮಾದರಿಯ ಇನ್ನೊಂದು ಆತ್ಮಾಹುತಿ ದಾಳಿಗೆ ಉಗ್ರ ಸಂಘಟನೆಗಳು ಸಿದ್ಧವಾಗಿವೆಯೇ? ಗುಪ್ತಚರ ಮೂಲಗಳಿಂದ ಸಿಕ್ಕಿರುವ ಮಾಹಿತಿಗಳ ಪ್ರಕಾರ ಇಂತಹದ್ದೊಂದು ದಾಳಿಗಳಾಗುವ ಸಾಧ್ಯತೆಗಳಿವೆ ಮತ್ತು ಈ ಬಾರಿ ಬೈಕನ್ನು ಬಳಸಿಕೊಂಡು ದಾಳಿಯನ್ನು ನಡೆಸಲು ಉಗ್ರಸಂಘಟನೆಗಳು ಯೋಜನೆ ಹಾಕಿಕೊಂಡಿವೆ ಎಂಬ ಆತಂಕಕಾರಿ ಮಾಹಿತಿ ಬಯಲಾಗಿದೆ. ಗುಪ್ತಚರ ಮಾಹಿತಿ ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯ ಮೇರೆಗೆ ಖಾಸಗಿ ಸುದ್ದಿವಾಹಿನಿಯೊಂದು ಈ ವಿವರವನ್ನು ಬಹಿರಂಗಗೊಳಿಸಿದೆ.
ಗುಪ್ತಚರ ಮಾಹಿತಿಗಳನ್ನು ಆಧರಿಸಿ ಹೇಳುವುದಾದರೆ, ಉಗ್ರರು ರಿಮೋಟ್ ಕಂಟ್ರೋಲ್ ಬಳಸಿ ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಪೋಟವೊಂದನ್ನು ನಡೆಸಲು ಸಂಚು ನಡೆಸಿರುವುದು ಗೊತ್ತಾಗಿದೆ. ಈ ಮಾಹಿತಿಯಿಂದ ಎಚ್ಚೆತ್ತುಕೊಂಡಿರುವ ಭದ್ರತಾ ಪಡೆಗಳು ಹೆದ್ದಾರಿಯುದ್ದಕ್ಕೂ ಭದ್ರತೆಯನ್ನು ಬಿಗಿಗೊಳಿಸಿವೆ ಮತ್ತು ಎಲ್ಲಾ ಭದ್ರತಾ ಪಡೆಗಳ ಜವಾನರನ್ನು ರಾಷ್ಟ್ರೀಯ ಹೆದ್ದಾರಿ ಮೂಲಕ ಕರೆದೊಯ್ಯುವ ಸೇನಾ ವಾಹನಗಳು ಬೆಳಿಗ್ಗೆ 9 ಗಂಟೆಯ ಬಳಿಕವಷ್ಟೇ ಪ್ರಯಾಣಿಸಬೇಕೆಂದು ಆದೇಶಹೊರಡಿಸಿವೆ.
ಜಮ್ಮು ಕಾಶ್ಮೀರದ ಭಯೋತ್ಪಾದನಾ ನಿಗ್ರಹ ವಿಭಾಗದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತನಿಖಾ ಮತ್ತು ಭದ್ರತಾ ದಳವು ಈ ಕುರಿತಾಗಿ ವರದಿಯೊಂದನ್ನು ಸಿದ್ಧಪಡಿಸಿದೆ. ಮತ್ತು ತನ್ನ ಆ ವರದಿಯಲ್ಲಿ ಅದು ಬಹಿರಂಗಗೊಳಿಸಿರುವ ಮಾಹಿತಿಗಳ ಪ್ರಕಾರ, ವಾಹನಗಳಲ್ಲಿರುವ ಕಳವು ನಿರೋಧಕ ಅಲಾರಾಂ ವ್ಯವಸ್ಥೆ ಅಥವಾ ಕೀಗಳು ಇತ್ತೀಚಿನ ದಿನಗಳಲ್ಲಿ ಉಗ್ರರಿಗೆ ಸುಧಾರಿತ ನ್ಪೋಟಕಗಳನ್ನು ನ್ಪೋಟಿಸಲು ಉತ್ತಮ ಸಾಧನವಾಗಿ ಮಾರ್ಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್