ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
Team Udayavani, Oct 15, 2021, 10:15 PM IST
ನಾಗ್ಪುರ: ಜಮ್ಮು ಮತ್ತು ಕಾಶ್ಮೀರದ ಜನರ ಮನಸ್ಸಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದಲೇ ಉಗ್ರರು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಶುಕ್ರವಾರ ನಾಗ್ಪುರದಲ್ಲಿ ವಿಜಯದಶಮಿ ಕಾರ್ಯಕ್ರಮದಲ್ಲಿ ಅವರು, ಪ್ರಸಕ್ತ ತಿಂಗಳ ಮೊದಲ 10 ದಿನಗಳಲ್ಲಿ ಹಿಂದೂ ಹಾಗೂ ಸಿಖ್ಖರನ್ನು ಗುರಿಯಾಗಿಸಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ಉಗ್ರರ ದಾಳಿ ಕುರಿತು ಪ್ರಸ್ತಾಪಿಸುತ್ತಾ ಈ ಮಾತುಗಳನ್ನಾಡಿದ್ದಾರೆ.
370ನೇ ವಿಧಿ ರದ್ದಾದ ಬಳಿಕ ಕೇಂದ್ರಾಡಳಿತ ಪ್ರದೇಶದ ಜನರಿಗೆ ಹಲವು ರೀತಿಯ ಅನುಕೂಲಗಳಾಗಿವೆ. ಈಗ ಉಗ್ರರು ತಮ್ಮ ಅಸ್ತಿತ್ವಕ್ಕಾಗಿ ಜನರಲ್ಲಿ ಭಯ ಮೂಡಿಸುವ ಕೆಲಸಕ್ಕಿಳಿದಿದ್ದಾರೆ. ಇದಕ್ಕಾಗಿಯೇ ಅವರು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕೊಲ್ಲುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರವು ಇಂಥವರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವ ಮೂಲಕ ಈ ಯುದ್ಧವನ್ನು ಗೆಲ್ಲಬೇಕು ಎಂದು ಭಾಗವತ್ ಕರೆ ನೀಡಿದ್ದಾರೆ.
ಇದನ್ನೂ ಓದಿ:ಮೂಕ ಪ್ರಾಣಿಯ ಈ ಪ್ರೀತಿಗೆ ಭಾಷೆಯಿಲ್ಲ!
ಡ್ರಗ್, ಒಟಿಟಿ, ಬಿಟ್ಕಾಯಿನ್ಗೆ ಕಡಿವಾಣ
ಮಾದಕದ್ರವ್ಯಗಳು, ಒಟಿಟಿ ವೇದಿಕೆ, ಬಿಟ್ಕಾಯಿನ್ಗಳ ಬಳಕೆ ಕುರಿತು ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ. ಒಟಿಟಿ ಪ್ಲಾಟ್ಫಾರಂಗಳಲ್ಲಿ “ಅನಿರ್ಬಂಧಿತ’ ಕಂಟೆಂಟ್ಗಳನ್ನು ತೋರಿಸಲಾಗುತ್ತಿದ್ದು, ಅದಕ್ಕೆ ಸರ್ಕಾರ ಕಡಿವಾಣ ಹಾಕಬೇಕಿದೆ. ಬಿಟ್ಕಾಯಿನ್ ಬಳಕೆಗೆ ಮೂಗುದಾರ ಹಾಕದಿದ್ದರೆ, ಅದು ಆರ್ಥಿಕತೆಯನ್ನು ಅಸ್ಥಿರಗೊಳಿಸಲಿದೆ. ಇನ್ನೊಂದೆಡೆ, ಸಮಾಜದ ಎಲ್ಲ ಸ್ತರಗಳಲ್ಲೂ ಮಾದಕ ದ್ರವ್ಯ ಸೇವನೆ ಚಾಲ್ತಿಯಲ್ಲಿದ್ದು, ಡ್ರಗ್ ಉದ್ದಿಮೆಯಿಂದ ಬರುವ ಹಣವನ್ನು ದೇಶವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಭಾರತದೊಂದಿಗೆ ಗಡಿ ಹಂಚಿಕೊಂಡಿರುವ ದೇಶಗಳು ಇವುಗಳನ್ನು ಉತ್ತೇಜಿಸುತ್ತಿವೆ ಎಂದೂ ಭಾಗವತ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
MUST WATCH
ಹೊಸ ಸೇರ್ಪಡೆ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Vande Bharat: 1.5 ವರ್ಷದಲ್ಲಿ ವಂದೇ ಭಾರತ್ಗೆ 50 ಬಾರಿ ಕಲ್ಲೆಸೆತ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್ಗೆ ದೂರು
Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ