ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
Team Udayavani, Oct 15, 2021, 10:15 PM IST
ನಾಗ್ಪುರ: ಜಮ್ಮು ಮತ್ತು ಕಾಶ್ಮೀರದ ಜನರ ಮನಸ್ಸಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದಲೇ ಉಗ್ರರು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಶುಕ್ರವಾರ ನಾಗ್ಪುರದಲ್ಲಿ ವಿಜಯದಶಮಿ ಕಾರ್ಯಕ್ರಮದಲ್ಲಿ ಅವರು, ಪ್ರಸಕ್ತ ತಿಂಗಳ ಮೊದಲ 10 ದಿನಗಳಲ್ಲಿ ಹಿಂದೂ ಹಾಗೂ ಸಿಖ್ಖರನ್ನು ಗುರಿಯಾಗಿಸಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ಉಗ್ರರ ದಾಳಿ ಕುರಿತು ಪ್ರಸ್ತಾಪಿಸುತ್ತಾ ಈ ಮಾತುಗಳನ್ನಾಡಿದ್ದಾರೆ.
370ನೇ ವಿಧಿ ರದ್ದಾದ ಬಳಿಕ ಕೇಂದ್ರಾಡಳಿತ ಪ್ರದೇಶದ ಜನರಿಗೆ ಹಲವು ರೀತಿಯ ಅನುಕೂಲಗಳಾಗಿವೆ. ಈಗ ಉಗ್ರರು ತಮ್ಮ ಅಸ್ತಿತ್ವಕ್ಕಾಗಿ ಜನರಲ್ಲಿ ಭಯ ಮೂಡಿಸುವ ಕೆಲಸಕ್ಕಿಳಿದಿದ್ದಾರೆ. ಇದಕ್ಕಾಗಿಯೇ ಅವರು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕೊಲ್ಲುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರವು ಇಂಥವರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವ ಮೂಲಕ ಈ ಯುದ್ಧವನ್ನು ಗೆಲ್ಲಬೇಕು ಎಂದು ಭಾಗವತ್ ಕರೆ ನೀಡಿದ್ದಾರೆ.
ಇದನ್ನೂ ಓದಿ:ಮೂಕ ಪ್ರಾಣಿಯ ಈ ಪ್ರೀತಿಗೆ ಭಾಷೆಯಿಲ್ಲ!
ಡ್ರಗ್, ಒಟಿಟಿ, ಬಿಟ್ಕಾಯಿನ್ಗೆ ಕಡಿವಾಣ
ಮಾದಕದ್ರವ್ಯಗಳು, ಒಟಿಟಿ ವೇದಿಕೆ, ಬಿಟ್ಕಾಯಿನ್ಗಳ ಬಳಕೆ ಕುರಿತು ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ. ಒಟಿಟಿ ಪ್ಲಾಟ್ಫಾರಂಗಳಲ್ಲಿ “ಅನಿರ್ಬಂಧಿತ’ ಕಂಟೆಂಟ್ಗಳನ್ನು ತೋರಿಸಲಾಗುತ್ತಿದ್ದು, ಅದಕ್ಕೆ ಸರ್ಕಾರ ಕಡಿವಾಣ ಹಾಕಬೇಕಿದೆ. ಬಿಟ್ಕಾಯಿನ್ ಬಳಕೆಗೆ ಮೂಗುದಾರ ಹಾಕದಿದ್ದರೆ, ಅದು ಆರ್ಥಿಕತೆಯನ್ನು ಅಸ್ಥಿರಗೊಳಿಸಲಿದೆ. ಇನ್ನೊಂದೆಡೆ, ಸಮಾಜದ ಎಲ್ಲ ಸ್ತರಗಳಲ್ಲೂ ಮಾದಕ ದ್ರವ್ಯ ಸೇವನೆ ಚಾಲ್ತಿಯಲ್ಲಿದ್ದು, ಡ್ರಗ್ ಉದ್ದಿಮೆಯಿಂದ ಬರುವ ಹಣವನ್ನು ದೇಶವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಭಾರತದೊಂದಿಗೆ ಗಡಿ ಹಂಚಿಕೊಂಡಿರುವ ದೇಶಗಳು ಇವುಗಳನ್ನು ಉತ್ತೇಜಿಸುತ್ತಿವೆ ಎಂದೂ ಭಾಗವತ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!