“ನಾವು ಸ್ವಾತಂತ್ರ್ಯದ ಸನಿಹದಲ್ಲಿದ್ದೇವೆ”: ಕಣಿವೆ ರಾಜ್ಯದಲ್ಲಿ ಗಲಭೆ ಎಬ್ಬಿಸಲು ಉಗ್ರರ ಸಂಚು
Team Udayavani, Aug 31, 2019, 9:25 AM IST
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿಯ ನಂತರ ಸಹಜ ಸ್ಥಿತಿಗೆ ಬಂದಿದ್ದ ಜನಜೀವನವನ್ನು ಹಾಳುಗೆಡವಲು ಉಗ್ರರು ಪಣ ತೊಟ್ಟಂತಿದೆ. ಪಾಕ್ ಮೂಲದ ಉಗ್ರರು ಕಾಶ್ಮೀರದಲ್ಲಿ ಜನರಿಗೆ ಅಂಗಡಿ ಮುಂಗಟ್ಟು ತೆರೆಯದಂತೆ, ಟ್ಯಾಕ್ಸಿಗಳನ್ನು ಓಡಿಸದಂತೆ ಬೆದರಿಕೆ ಒಡ್ಡುತ್ತಿದ್ದಾರೆ.
ಉಗ್ರ ಸಂಘಟನೆಗಳಾದ ಲಷ್ಕರ್ ಎ ತೋಯ್ಬಾ ಮತ್ತು ಹಿಜ್ಬುಲ್ ಮುಜಾಹಿದೀನ್ ಒಂದು ಪತ್ರ ಬಿಡುಗಡೆ ಮಾಡಿದ್ದು, “ನಾವು ಸ್ವಾತಂತ್ರ್ಯದ ಸನಿಹದಲ್ಲಿದ್ದೇವೆ, ನಮ್ಮ ಕೆಲಸವನ್ನು ಇನ್ನೂ ಸಧೃಡಗೊಳಿಸಬೇಕಿದೆ” ಎಂದು ಪತ್ರದಲ್ಲಿ ಬರೆದುಕೊಂಡಿದೆ. ಕಣಿವೆಯಲ್ಲಿ ಯಾರೂ ತಮ್ಮ ಮನೆಯಿಂದ ಹೊರಬರಬಾರದು. ಟ್ಯಾಕ್ಸಿಗಳನ್ನು ಓಡಿಸಬಾರದು. ಎಲ್ಲಾ ಟ್ಯಾಕ್ಸಿಗಳ ನೋಂದಣಿ ಸಂಖ್ಯೆಗಳು ನಮ್ಮ ಸಂಗ್ರಹದಲ್ಲಿದೆ. ಯಾರಾದರೂ ಟ್ಯಾಕ್ಸಿಗಳನ್ನು ರಸ್ತೆಗೆ ತಂದರೆ ಅವರು ಮುಂದಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಉಗ್ರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಶಾಲಾ ಕಾಲೇಜುಗಳನ್ನು ಮರು ಆರಂಭಗೊಳಿಸಿರುವ ಕ್ರಮದ ಬಗ್ಗೆಯೂ ಉಗ್ರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಅಂಗಡಿ ರಾತ್ರಿಯವರೆಗೂ ತೆರೆದಿದ್ದ ಕಾರಣಕ್ಕಾಗಿ 65 ವರ್ಷದ ವೃದ್ದನನ್ನು ಗುರುವಾರ ಉಗ್ರರು ಹತ್ಯೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ