ಕಿವುಡ-ಮೂಗನಿಂದ ಬೆದರಿಕೆ
Team Udayavani, Feb 21, 2019, 12:30 AM IST
ಹೊಸದಿಲ್ಲಿ: ಪುಲ್ವಾಮಾ ದಾಳಿಯ ಮೂಲಕ ಜಮ್ಮು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಉಗ್ರರು ಸ್ಥಳೀಯ ಯುವಕರನ್ನು ಬಳಸಿಕೊಳ್ಳುತ್ತಿರುವ ಅಂಶ ಬಹಿರಂಗವಾದ ಬೆನ್ನಲ್ಲೇ ಮತ್ತೂಂದು ಆತಂಕಕಾರಿ ವಿಚಾರ ಬಯಲಾಗಿದೆ. ಸ್ಥಳೀಯ ದಿವ್ಯಾಂಗರನ್ನು ಕೂಡ ಉಗ್ರರು ಸೆಳೆದು ಅವರನ್ನೂ ರಕ್ತಪಿಪಾಸುಗಳನ್ನಾಗಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ, ಕಿವುಡ ಮತ್ತು ಮೂಗ ಉಗ್ರನೊಬ್ಬ ಸಂಜ್ಞಾ ಭಾಷೆಯ (ಸೈನ್ ಲ್ಯಾಂಗ್ವೇಜ್) ಮೂಲಕ ಭಾರತದ ಮೇಲೆ ಮತ್ತಷ್ಟು ದಾಳಿ ಮಾಡುವ ಬೆದರಿಕೆಯೊಡ್ಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.
ಈತನ ಸಂಜ್ಞಾ ಭಾಷೆಯನ್ನು ಮಧ್ಯಪ್ರದೇಶದ ಸಂಜ್ಞಾ ಭಾಷೆ ತಜ್ಞರಾದ ಜ್ಞಾನೇಂದ್ರ ಪುರೋಹಿತ್ ಎಂಬುವರು ಬಿಡಿಸಿ ಹೇಳಿದ್ದು, ಮುಂಬರುವ ದಿನಗಳಲ್ಲಿ ಹೊಸದಿಲ್ಲಿ ಹಾಗೂ ಇತರೆಡೆ ಭೀಕರ ದಾಳಿಗಳನ್ನು ನಡೆಸಲು ಸಂಚು ರೂಪಿಸಲಾಗಿದೆ. ತನಗೆ ದಾಳಿ ಮಾಡುವ ಅವಕಾಶ ಸಿಕ್ಕರೆ, ಕಿವುಡ ಮತ್ತು ಮೂಗರನ್ನು ಬಿಟ್ಟು ಮಿಕ್ಕೆಲ್ಲ ಭಾರತೀಯರನ್ನು ನಿರ್ನಾಮ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾರೆ. ಈ ವಿಡಿಯೊ 2016-18ರ ನಡುವೆ ಅಂತರ್ಜಾಲಕ್ಕೆ ಅಪ್ಲೋಡ್ ಆಗಿದ್ದು, ಪುಲ್ವಾಮಾ ದಾಳಿಯ ವೇಳೆ ಮತ್ತೆ ಕಾಣಿಸಿದೆ ಎಂದಿರುವ ಪುರೋಹಿತ್, ಕಣಿವೆ ರಾಜ್ಯದಲ್ಲಿ ಅಂಗವಿಕಲರನ್ನು ಉಗ್ರರು ಯಾವ ರೀತಿ ಹಾಳು ಮಾಡುತ್ತಿದ್ದಾರೆಂದು ಈ ವಿಡಿಯೋ ಸಾಬೀತುಪಡಿಸುತ್ತದೆ ಎಂದಿದ್ದಾರೆ.
ಕಿವುಡ-ಮೂಗರನ್ನು ಬಿಟ್ಟು ಮಿಕ್ಕೆಲ್ಲ ಭಾರತೀಯರನ್ನು ಕೊಲ್ಲುವ ಉದ್ದೇಶ
ದಿಲ್ಲಿ ಸಹಿತ ಭಾರತದ ಇತರೆಡೆ ದಾಳಿ ಮಾಡುವ ಬೆದರಿಕೆ
ಸಂಜ್ಞಾ ಭಾಷೆಯ ವಿಡಿಯೋದಲ್ಲಿ ದಾಳಿಯ ಮುನ್ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ